ಕೃಷಿ

ಭೂತಾನ್‌ ನಿಂದ 17,000 ಟನ್ ಅಡಿಕೆ ಆಮದಿಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಉತ್ಪಾದನೆ ಹೆಚ್ಚಳದ ನಡುವೆಯೇ ಭೂತಾನ್‌ನಿಂದ ಪ್ರತಿವರ್ಷ  ಷರತ್ತು ಇಲ್ಲದೆಯೇ 17,000 ಟನ್ ಹಸಿರು ಅಡಿಕೆಯನ್ನು(Arecanut) ಆಮದು ಮಾಡಿಕೊಳ್ಳಬಹುದು ಎಂದು ಬುಧವಾರ ಕೇಂದ್ರ ಸರ್ಕಾರದ ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT)  ಅನುಮತಿ ನೀಡಿದೆ.

Advertisement
Advertisement

ಇದೀಗ ಭೂತಾನ್‌ನಿಂದ ಕನಿಷ್ಟ ಆಮದು ಬೆಲೆಯ ಷರತ್ತು ಇಲ್ಲದೆಯೇ ಪ್ರತೀ ವರ್ಷ 17000 ಟನ್‌ ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದಾಗಿದೆ. ಅಂದರೆ ಕನಿಷ್ಟ ಆಮದು ಬೆಲೆ 251 ರೂಪಾಯಿ ವಿಧಿಸಲಾಗಿತ್ತು. ಇದನ್ನು ಏರಿಕೆ ಮಾಡಲು ಪ್ರಯತ್ನ ನಡೆಯುತ್ತಿದೆ. 2017 ರಲ್ಲಿ, ದೇಶೀಯ ರೈತರನ್ನು ರಕ್ಷಿಸುವ ಉದ್ದೇಶದಿಂದ ಸರ್ಕಾರವು ಪ್ರತಿ ಕೆಜಿಗೆ 251 ರೂ.ಗೆ ಕನಿಷ್ಟ ಆಮದು ದರವನ್ನು ವಿಧಿಸಿತು. ಈ ಮಿತಿಗಿಂತ ಕಡಿಮೆ ಇರುವ ಅಡಿಕೆಯನ್ನು ಆಮದು ಮಾಡಿವಂತಿಲ್ಲ, ಆಮದು ಬೆಲೆಗಿಂತ ಅಧಿಕ ದರದ ಅಡಿಕೆಯನ್ನು ಆಮದು ಮಾಡಬಹುದು ಎಂದು ತಿಳಿಸಲಾಗಿತ್ತು. ಈ ನಡುವೆಯೇ ಯಾವುದೇ ಷರತ್ತು ಇಲ್ಲದೆ ಅಡಿಕೆ ಆಮದು ಮಾಡಲು ಅವಕಾಶ ನೀಡಲಾಗಿದೆ. ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT) 2022-23ನೇ ಪ್ರಸಕ್ತ ಸಾಲಿನಲ್ಲಿ ಭೂತಾನ್‌ನಿಂದ ಕನಿಷ್ಟ ಆಮದು ಬೆಲೆ ಇಲ್ಲದೇ 8,500 ಮೆಟ್ರಿಕ್ ಟನ್‌ನಷ್ಟು ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದು ಎಂದು ಹೇಳಿತ್ತು. ಮುಂದಿನ ವರ್ಷದಿಂದ  ಅಂದರೆ 2023-24 ರಿಂದ 17000 ಮೆಟ್ರಿಕ್ ಟನ್ ಆಮದು ಮಾಡಿಕೊಳ್ಳಬಹುದು ಈಗಾಗಲೇ ತಿಳಿಸಲಾಗಿದೆ.  ಇದಕ್ಕಾಗಿ ವಿವಿಧ ನೀತಿಗಳನ್ನು ರೂಪಿಸಲಾಗಿದೆ.

ಈಗ ಆಗಿರುವ ನೀತಿಯಿಂದ ಅಡಿಕೆ ಬೆಳೆಗಾರರಿಗರ ಆತಂಕ ಇದೆ. ಮುಕ್ತ ವ್ಯಾಪಾರ ಒಪ್ಪಂದದ ಪ್ರಕಾರ ಕೆಲವು ದೇಶಗಳಿಂದ ಮುಕ್ತ ವ್ಯಾಪಾರ ವಹಿವಾಟು ನಡೆಸಬಹುದು. ಭಾರತ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವೆ ಆಮದು ಸುಂಕ ಇತ್ಯಾದಿ ಕೆಲವು ನಿಯಮಗಳ ಮೂಲಕ ಆಮದು ಹಾಗೂ ರಫ್ತು ನಡೆಸಬಹುದಾಗಿದೆ. ಈಗ ಅಡಿಕೆ ಆಮದು ಕನಿಷ್ಟ ಬೆಲೆ ಇಲ್ಲದೆಯೇ ಅಡಿಕೆ ಆಮದು ಅವಕಾಶ ನೀಡಿದರೆ ಭವಿಷ್ಯದಲ್ಲಿ ಭಾರತದ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಲಿದೆ ಎನ್ನುವುದು ಕೃಷಿ  ಮಾರುಕಟ್ಟೆ ವಲಯದ ಅಭಿಪ್ರಾಯ. ಸದ್ಯ ಈ ಆಮದು ನಿಯಮಗಳಿಂದ ಅಡಿಕೆ ಬೆಳೆಗಾರರಿಗೆ , ಮಾರುಕಟ್ಟೆಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

21 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

21 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

2 days ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

2 days ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

2 days ago