Advertisement
ಕೃಷಿ

ಭೂತಾನ್‌ ನಿಂದ 17,000 ಟನ್ ಅಡಿಕೆ ಆಮದಿಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ |

Share

ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಉತ್ಪಾದನೆ ಹೆಚ್ಚಳದ ನಡುವೆಯೇ ಭೂತಾನ್‌ನಿಂದ ಪ್ರತಿವರ್ಷ  ಷರತ್ತು ಇಲ್ಲದೆಯೇ 17,000 ಟನ್ ಹಸಿರು ಅಡಿಕೆಯನ್ನು(Arecanut) ಆಮದು ಮಾಡಿಕೊಳ್ಳಬಹುದು ಎಂದು ಬುಧವಾರ ಕೇಂದ್ರ ಸರ್ಕಾರದ ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT)  ಅನುಮತಿ ನೀಡಿದೆ.

ಇದೀಗ ಭೂತಾನ್‌ನಿಂದ ಕನಿಷ್ಟ ಆಮದು ಬೆಲೆಯ ಷರತ್ತು ಇಲ್ಲದೆಯೇ ಪ್ರತೀ ವರ್ಷ 17000 ಟನ್‌ ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದಾಗಿದೆ. ಅಂದರೆ ಕನಿಷ್ಟ ಆಮದು ಬೆಲೆ 251 ರೂಪಾಯಿ ವಿಧಿಸಲಾಗಿತ್ತು. ಇದನ್ನು ಏರಿಕೆ ಮಾಡಲು ಪ್ರಯತ್ನ ನಡೆಯುತ್ತಿದೆ. 2017 ರಲ್ಲಿ, ದೇಶೀಯ ರೈತರನ್ನು ರಕ್ಷಿಸುವ ಉದ್ದೇಶದಿಂದ ಸರ್ಕಾರವು ಪ್ರತಿ ಕೆಜಿಗೆ 251 ರೂ.ಗೆ ಕನಿಷ್ಟ ಆಮದು ದರವನ್ನು ವಿಧಿಸಿತು. ಈ ಮಿತಿಗಿಂತ ಕಡಿಮೆ ಇರುವ ಅಡಿಕೆಯನ್ನು ಆಮದು ಮಾಡಿವಂತಿಲ್ಲ, ಆಮದು ಬೆಲೆಗಿಂತ ಅಧಿಕ ದರದ ಅಡಿಕೆಯನ್ನು ಆಮದು ಮಾಡಬಹುದು ಎಂದು ತಿಳಿಸಲಾಗಿತ್ತು. ಈ ನಡುವೆಯೇ ಯಾವುದೇ ಷರತ್ತು ಇಲ್ಲದೆ ಅಡಿಕೆ ಆಮದು ಮಾಡಲು ಅವಕಾಶ ನೀಡಲಾಗಿದೆ. ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT) 2022-23ನೇ ಪ್ರಸಕ್ತ ಸಾಲಿನಲ್ಲಿ ಭೂತಾನ್‌ನಿಂದ ಕನಿಷ್ಟ ಆಮದು ಬೆಲೆ ಇಲ್ಲದೇ 8,500 ಮೆಟ್ರಿಕ್ ಟನ್‌ನಷ್ಟು ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದು ಎಂದು ಹೇಳಿತ್ತು. ಮುಂದಿನ ವರ್ಷದಿಂದ  ಅಂದರೆ 2023-24 ರಿಂದ 17000 ಮೆಟ್ರಿಕ್ ಟನ್ ಆಮದು ಮಾಡಿಕೊಳ್ಳಬಹುದು ಈಗಾಗಲೇ ತಿಳಿಸಲಾಗಿದೆ.  ಇದಕ್ಕಾಗಿ ವಿವಿಧ ನೀತಿಗಳನ್ನು ರೂಪಿಸಲಾಗಿದೆ.

ಈಗ ಆಗಿರುವ ನೀತಿಯಿಂದ ಅಡಿಕೆ ಬೆಳೆಗಾರರಿಗರ ಆತಂಕ ಇದೆ. ಮುಕ್ತ ವ್ಯಾಪಾರ ಒಪ್ಪಂದದ ಪ್ರಕಾರ ಕೆಲವು ದೇಶಗಳಿಂದ ಮುಕ್ತ ವ್ಯಾಪಾರ ವಹಿವಾಟು ನಡೆಸಬಹುದು. ಭಾರತ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವೆ ಆಮದು ಸುಂಕ ಇತ್ಯಾದಿ ಕೆಲವು ನಿಯಮಗಳ ಮೂಲಕ ಆಮದು ಹಾಗೂ ರಫ್ತು ನಡೆಸಬಹುದಾಗಿದೆ. ಈಗ ಅಡಿಕೆ ಆಮದು ಕನಿಷ್ಟ ಬೆಲೆ ಇಲ್ಲದೆಯೇ ಅಡಿಕೆ ಆಮದು ಅವಕಾಶ ನೀಡಿದರೆ ಭವಿಷ್ಯದಲ್ಲಿ ಭಾರತದ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಲಿದೆ ಎನ್ನುವುದು ಕೃಷಿ  ಮಾರುಕಟ್ಟೆ ವಲಯದ ಅಭಿಪ್ರಾಯ. ಸದ್ಯ ಈ ಆಮದು ನಿಯಮಗಳಿಂದ ಅಡಿಕೆ ಬೆಳೆಗಾರರಿಗೆ , ಮಾರುಕಟ್ಟೆಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

7 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

22 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago