Advertisement
ಕೃಷಿ

ಭೂತಾನ್‌ ನಿಂದ 17,000 ಟನ್ ಅಡಿಕೆ ಆಮದಿಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ |

Share

ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಉತ್ಪಾದನೆ ಹೆಚ್ಚಳದ ನಡುವೆಯೇ ಭೂತಾನ್‌ನಿಂದ ಪ್ರತಿವರ್ಷ  ಷರತ್ತು ಇಲ್ಲದೆಯೇ 17,000 ಟನ್ ಹಸಿರು ಅಡಿಕೆಯನ್ನು(Arecanut) ಆಮದು ಮಾಡಿಕೊಳ್ಳಬಹುದು ಎಂದು ಬುಧವಾರ ಕೇಂದ್ರ ಸರ್ಕಾರದ ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT)  ಅನುಮತಿ ನೀಡಿದೆ.

Advertisement
Advertisement

ಇದೀಗ ಭೂತಾನ್‌ನಿಂದ ಕನಿಷ್ಟ ಆಮದು ಬೆಲೆಯ ಷರತ್ತು ಇಲ್ಲದೆಯೇ ಪ್ರತೀ ವರ್ಷ 17000 ಟನ್‌ ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದಾಗಿದೆ. ಅಂದರೆ ಕನಿಷ್ಟ ಆಮದು ಬೆಲೆ 251 ರೂಪಾಯಿ ವಿಧಿಸಲಾಗಿತ್ತು. ಇದನ್ನು ಏರಿಕೆ ಮಾಡಲು ಪ್ರಯತ್ನ ನಡೆಯುತ್ತಿದೆ. 2017 ರಲ್ಲಿ, ದೇಶೀಯ ರೈತರನ್ನು ರಕ್ಷಿಸುವ ಉದ್ದೇಶದಿಂದ ಸರ್ಕಾರವು ಪ್ರತಿ ಕೆಜಿಗೆ 251 ರೂ.ಗೆ ಕನಿಷ್ಟ ಆಮದು ದರವನ್ನು ವಿಧಿಸಿತು. ಈ ಮಿತಿಗಿಂತ ಕಡಿಮೆ ಇರುವ ಅಡಿಕೆಯನ್ನು ಆಮದು ಮಾಡಿವಂತಿಲ್ಲ, ಆಮದು ಬೆಲೆಗಿಂತ ಅಧಿಕ ದರದ ಅಡಿಕೆಯನ್ನು ಆಮದು ಮಾಡಬಹುದು ಎಂದು ತಿಳಿಸಲಾಗಿತ್ತು. ಈ ನಡುವೆಯೇ ಯಾವುದೇ ಷರತ್ತು ಇಲ್ಲದೆ ಅಡಿಕೆ ಆಮದು ಮಾಡಲು ಅವಕಾಶ ನೀಡಲಾಗಿದೆ. ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT) 2022-23ನೇ ಪ್ರಸಕ್ತ ಸಾಲಿನಲ್ಲಿ ಭೂತಾನ್‌ನಿಂದ ಕನಿಷ್ಟ ಆಮದು ಬೆಲೆ ಇಲ್ಲದೇ 8,500 ಮೆಟ್ರಿಕ್ ಟನ್‌ನಷ್ಟು ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದು ಎಂದು ಹೇಳಿತ್ತು. ಮುಂದಿನ ವರ್ಷದಿಂದ  ಅಂದರೆ 2023-24 ರಿಂದ 17000 ಮೆಟ್ರಿಕ್ ಟನ್ ಆಮದು ಮಾಡಿಕೊಳ್ಳಬಹುದು ಈಗಾಗಲೇ ತಿಳಿಸಲಾಗಿದೆ.  ಇದಕ್ಕಾಗಿ ವಿವಿಧ ನೀತಿಗಳನ್ನು ರೂಪಿಸಲಾಗಿದೆ.

Advertisement

ಈಗ ಆಗಿರುವ ನೀತಿಯಿಂದ ಅಡಿಕೆ ಬೆಳೆಗಾರರಿಗರ ಆತಂಕ ಇದೆ. ಮುಕ್ತ ವ್ಯಾಪಾರ ಒಪ್ಪಂದದ ಪ್ರಕಾರ ಕೆಲವು ದೇಶಗಳಿಂದ ಮುಕ್ತ ವ್ಯಾಪಾರ ವಹಿವಾಟು ನಡೆಸಬಹುದು. ಭಾರತ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವೆ ಆಮದು ಸುಂಕ ಇತ್ಯಾದಿ ಕೆಲವು ನಿಯಮಗಳ ಮೂಲಕ ಆಮದು ಹಾಗೂ ರಫ್ತು ನಡೆಸಬಹುದಾಗಿದೆ. ಈಗ ಅಡಿಕೆ ಆಮದು ಕನಿಷ್ಟ ಬೆಲೆ ಇಲ್ಲದೆಯೇ ಅಡಿಕೆ ಆಮದು ಅವಕಾಶ ನೀಡಿದರೆ ಭವಿಷ್ಯದಲ್ಲಿ ಭಾರತದ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಲಿದೆ ಎನ್ನುವುದು ಕೃಷಿ  ಮಾರುಕಟ್ಟೆ ವಲಯದ ಅಭಿಪ್ರಾಯ. ಸದ್ಯ ಈ ಆಮದು ನಿಯಮಗಳಿಂದ ಅಡಿಕೆ ಬೆಳೆಗಾರರಿಗೆ , ಮಾರುಕಟ್ಟೆಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

5 hours ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

6 hours ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

10 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

10 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

14 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 day ago