Advertisement
ಕೃಷಿ

ಭೂತಾನ್‌ ನಿಂದ 17,000 ಟನ್ ಅಡಿಕೆ ಆಮದಿಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ |

Share

ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಉತ್ಪಾದನೆ ಹೆಚ್ಚಳದ ನಡುವೆಯೇ ಭೂತಾನ್‌ನಿಂದ ಪ್ರತಿವರ್ಷ  ಷರತ್ತು ಇಲ್ಲದೆಯೇ 17,000 ಟನ್ ಹಸಿರು ಅಡಿಕೆಯನ್ನು(Arecanut) ಆಮದು ಮಾಡಿಕೊಳ್ಳಬಹುದು ಎಂದು ಬುಧವಾರ ಕೇಂದ್ರ ಸರ್ಕಾರದ ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT)  ಅನುಮತಿ ನೀಡಿದೆ.

ಇದೀಗ ಭೂತಾನ್‌ನಿಂದ ಕನಿಷ್ಟ ಆಮದು ಬೆಲೆಯ ಷರತ್ತು ಇಲ್ಲದೆಯೇ ಪ್ರತೀ ವರ್ಷ 17000 ಟನ್‌ ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದಾಗಿದೆ. ಅಂದರೆ ಕನಿಷ್ಟ ಆಮದು ಬೆಲೆ 251 ರೂಪಾಯಿ ವಿಧಿಸಲಾಗಿತ್ತು. ಇದನ್ನು ಏರಿಕೆ ಮಾಡಲು ಪ್ರಯತ್ನ ನಡೆಯುತ್ತಿದೆ. 2017 ರಲ್ಲಿ, ದೇಶೀಯ ರೈತರನ್ನು ರಕ್ಷಿಸುವ ಉದ್ದೇಶದಿಂದ ಸರ್ಕಾರವು ಪ್ರತಿ ಕೆಜಿಗೆ 251 ರೂ.ಗೆ ಕನಿಷ್ಟ ಆಮದು ದರವನ್ನು ವಿಧಿಸಿತು. ಈ ಮಿತಿಗಿಂತ ಕಡಿಮೆ ಇರುವ ಅಡಿಕೆಯನ್ನು ಆಮದು ಮಾಡಿವಂತಿಲ್ಲ, ಆಮದು ಬೆಲೆಗಿಂತ ಅಧಿಕ ದರದ ಅಡಿಕೆಯನ್ನು ಆಮದು ಮಾಡಬಹುದು ಎಂದು ತಿಳಿಸಲಾಗಿತ್ತು. ಈ ನಡುವೆಯೇ ಯಾವುದೇ ಷರತ್ತು ಇಲ್ಲದೆ ಅಡಿಕೆ ಆಮದು ಮಾಡಲು ಅವಕಾಶ ನೀಡಲಾಗಿದೆ. ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT) 2022-23ನೇ ಪ್ರಸಕ್ತ ಸಾಲಿನಲ್ಲಿ ಭೂತಾನ್‌ನಿಂದ ಕನಿಷ್ಟ ಆಮದು ಬೆಲೆ ಇಲ್ಲದೇ 8,500 ಮೆಟ್ರಿಕ್ ಟನ್‌ನಷ್ಟು ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದು ಎಂದು ಹೇಳಿತ್ತು. ಮುಂದಿನ ವರ್ಷದಿಂದ  ಅಂದರೆ 2023-24 ರಿಂದ 17000 ಮೆಟ್ರಿಕ್ ಟನ್ ಆಮದು ಮಾಡಿಕೊಳ್ಳಬಹುದು ಈಗಾಗಲೇ ತಿಳಿಸಲಾಗಿದೆ.  ಇದಕ್ಕಾಗಿ ವಿವಿಧ ನೀತಿಗಳನ್ನು ರೂಪಿಸಲಾಗಿದೆ.

ಈಗ ಆಗಿರುವ ನೀತಿಯಿಂದ ಅಡಿಕೆ ಬೆಳೆಗಾರರಿಗರ ಆತಂಕ ಇದೆ. ಮುಕ್ತ ವ್ಯಾಪಾರ ಒಪ್ಪಂದದ ಪ್ರಕಾರ ಕೆಲವು ದೇಶಗಳಿಂದ ಮುಕ್ತ ವ್ಯಾಪಾರ ವಹಿವಾಟು ನಡೆಸಬಹುದು. ಭಾರತ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವೆ ಆಮದು ಸುಂಕ ಇತ್ಯಾದಿ ಕೆಲವು ನಿಯಮಗಳ ಮೂಲಕ ಆಮದು ಹಾಗೂ ರಫ್ತು ನಡೆಸಬಹುದಾಗಿದೆ. ಈಗ ಅಡಿಕೆ ಆಮದು ಕನಿಷ್ಟ ಬೆಲೆ ಇಲ್ಲದೆಯೇ ಅಡಿಕೆ ಆಮದು ಅವಕಾಶ ನೀಡಿದರೆ ಭವಿಷ್ಯದಲ್ಲಿ ಭಾರತದ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಲಿದೆ ಎನ್ನುವುದು ಕೃಷಿ  ಮಾರುಕಟ್ಟೆ ವಲಯದ ಅಭಿಪ್ರಾಯ. ಸದ್ಯ ಈ ಆಮದು ನಿಯಮಗಳಿಂದ ಅಡಿಕೆ ಬೆಳೆಗಾರರಿಗೆ , ಮಾರುಕಟ್ಟೆಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

12 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

19 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

19 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

19 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago