Advertisement
ಕೃಷಿ

ಭೂತಾನ್‌ ನಿಂದ 17,000 ಟನ್ ಅಡಿಕೆ ಆಮದಿಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ |

Share

ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಉತ್ಪಾದನೆ ಹೆಚ್ಚಳದ ನಡುವೆಯೇ ಭೂತಾನ್‌ನಿಂದ ಪ್ರತಿವರ್ಷ  ಷರತ್ತು ಇಲ್ಲದೆಯೇ 17,000 ಟನ್ ಹಸಿರು ಅಡಿಕೆಯನ್ನು(Arecanut) ಆಮದು ಮಾಡಿಕೊಳ್ಳಬಹುದು ಎಂದು ಬುಧವಾರ ಕೇಂದ್ರ ಸರ್ಕಾರದ ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT)  ಅನುಮತಿ ನೀಡಿದೆ.

ಇದೀಗ ಭೂತಾನ್‌ನಿಂದ ಕನಿಷ್ಟ ಆಮದು ಬೆಲೆಯ ಷರತ್ತು ಇಲ್ಲದೆಯೇ ಪ್ರತೀ ವರ್ಷ 17000 ಟನ್‌ ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದಾಗಿದೆ. ಅಂದರೆ ಕನಿಷ್ಟ ಆಮದು ಬೆಲೆ 251 ರೂಪಾಯಿ ವಿಧಿಸಲಾಗಿತ್ತು. ಇದನ್ನು ಏರಿಕೆ ಮಾಡಲು ಪ್ರಯತ್ನ ನಡೆಯುತ್ತಿದೆ. 2017 ರಲ್ಲಿ, ದೇಶೀಯ ರೈತರನ್ನು ರಕ್ಷಿಸುವ ಉದ್ದೇಶದಿಂದ ಸರ್ಕಾರವು ಪ್ರತಿ ಕೆಜಿಗೆ 251 ರೂ.ಗೆ ಕನಿಷ್ಟ ಆಮದು ದರವನ್ನು ವಿಧಿಸಿತು. ಈ ಮಿತಿಗಿಂತ ಕಡಿಮೆ ಇರುವ ಅಡಿಕೆಯನ್ನು ಆಮದು ಮಾಡಿವಂತಿಲ್ಲ, ಆಮದು ಬೆಲೆಗಿಂತ ಅಧಿಕ ದರದ ಅಡಿಕೆಯನ್ನು ಆಮದು ಮಾಡಬಹುದು ಎಂದು ತಿಳಿಸಲಾಗಿತ್ತು. ಈ ನಡುವೆಯೇ ಯಾವುದೇ ಷರತ್ತು ಇಲ್ಲದೆ ಅಡಿಕೆ ಆಮದು ಮಾಡಲು ಅವಕಾಶ ನೀಡಲಾಗಿದೆ. ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT) 2022-23ನೇ ಪ್ರಸಕ್ತ ಸಾಲಿನಲ್ಲಿ ಭೂತಾನ್‌ನಿಂದ ಕನಿಷ್ಟ ಆಮದು ಬೆಲೆ ಇಲ್ಲದೇ 8,500 ಮೆಟ್ರಿಕ್ ಟನ್‌ನಷ್ಟು ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದು ಎಂದು ಹೇಳಿತ್ತು. ಮುಂದಿನ ವರ್ಷದಿಂದ  ಅಂದರೆ 2023-24 ರಿಂದ 17000 ಮೆಟ್ರಿಕ್ ಟನ್ ಆಮದು ಮಾಡಿಕೊಳ್ಳಬಹುದು ಈಗಾಗಲೇ ತಿಳಿಸಲಾಗಿದೆ.  ಇದಕ್ಕಾಗಿ ವಿವಿಧ ನೀತಿಗಳನ್ನು ರೂಪಿಸಲಾಗಿದೆ.

ಈಗ ಆಗಿರುವ ನೀತಿಯಿಂದ ಅಡಿಕೆ ಬೆಳೆಗಾರರಿಗರ ಆತಂಕ ಇದೆ. ಮುಕ್ತ ವ್ಯಾಪಾರ ಒಪ್ಪಂದದ ಪ್ರಕಾರ ಕೆಲವು ದೇಶಗಳಿಂದ ಮುಕ್ತ ವ್ಯಾಪಾರ ವಹಿವಾಟು ನಡೆಸಬಹುದು. ಭಾರತ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವೆ ಆಮದು ಸುಂಕ ಇತ್ಯಾದಿ ಕೆಲವು ನಿಯಮಗಳ ಮೂಲಕ ಆಮದು ಹಾಗೂ ರಫ್ತು ನಡೆಸಬಹುದಾಗಿದೆ. ಈಗ ಅಡಿಕೆ ಆಮದು ಕನಿಷ್ಟ ಬೆಲೆ ಇಲ್ಲದೆಯೇ ಅಡಿಕೆ ಆಮದು ಅವಕಾಶ ನೀಡಿದರೆ ಭವಿಷ್ಯದಲ್ಲಿ ಭಾರತದ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಲಿದೆ ಎನ್ನುವುದು ಕೃಷಿ  ಮಾರುಕಟ್ಟೆ ವಲಯದ ಅಭಿಪ್ರಾಯ. ಸದ್ಯ ಈ ಆಮದು ನಿಯಮಗಳಿಂದ ಅಡಿಕೆ ಬೆಳೆಗಾರರಿಗೆ , ಮಾರುಕಟ್ಟೆಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

2 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

10 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

14 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

19 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago