Advertisement
ಕೃಷಿ

ಭೂತಾನ್‌ ನಿಂದ 17,000 ಟನ್ ಅಡಿಕೆ ಆಮದಿಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ |

Share

ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ಅಡಿಕೆ ಬೆಳೆ ವಿಸ್ತರಣೆ, ಅಡಿಕೆ ಉತ್ಪಾದನೆ ಹೆಚ್ಚಳದ ನಡುವೆಯೇ ಭೂತಾನ್‌ನಿಂದ ಪ್ರತಿವರ್ಷ  ಷರತ್ತು ಇಲ್ಲದೆಯೇ 17,000 ಟನ್ ಹಸಿರು ಅಡಿಕೆಯನ್ನು(Arecanut) ಆಮದು ಮಾಡಿಕೊಳ್ಳಬಹುದು ಎಂದು ಬುಧವಾರ ಕೇಂದ್ರ ಸರ್ಕಾರದ ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT)  ಅನುಮತಿ ನೀಡಿದೆ.

ಇದೀಗ ಭೂತಾನ್‌ನಿಂದ ಕನಿಷ್ಟ ಆಮದು ಬೆಲೆಯ ಷರತ್ತು ಇಲ್ಲದೆಯೇ ಪ್ರತೀ ವರ್ಷ 17000 ಟನ್‌ ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದಾಗಿದೆ. ಅಂದರೆ ಕನಿಷ್ಟ ಆಮದು ಬೆಲೆ 251 ರೂಪಾಯಿ ವಿಧಿಸಲಾಗಿತ್ತು. ಇದನ್ನು ಏರಿಕೆ ಮಾಡಲು ಪ್ರಯತ್ನ ನಡೆಯುತ್ತಿದೆ. 2017 ರಲ್ಲಿ, ದೇಶೀಯ ರೈತರನ್ನು ರಕ್ಷಿಸುವ ಉದ್ದೇಶದಿಂದ ಸರ್ಕಾರವು ಪ್ರತಿ ಕೆಜಿಗೆ 251 ರೂ.ಗೆ ಕನಿಷ್ಟ ಆಮದು ದರವನ್ನು ವಿಧಿಸಿತು. ಈ ಮಿತಿಗಿಂತ ಕಡಿಮೆ ಇರುವ ಅಡಿಕೆಯನ್ನು ಆಮದು ಮಾಡಿವಂತಿಲ್ಲ, ಆಮದು ಬೆಲೆಗಿಂತ ಅಧಿಕ ದರದ ಅಡಿಕೆಯನ್ನು ಆಮದು ಮಾಡಬಹುದು ಎಂದು ತಿಳಿಸಲಾಗಿತ್ತು. ಈ ನಡುವೆಯೇ ಯಾವುದೇ ಷರತ್ತು ಇಲ್ಲದೆ ಅಡಿಕೆ ಆಮದು ಮಾಡಲು ಅವಕಾಶ ನೀಡಲಾಗಿದೆ. ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT) 2022-23ನೇ ಪ್ರಸಕ್ತ ಸಾಲಿನಲ್ಲಿ ಭೂತಾನ್‌ನಿಂದ ಕನಿಷ್ಟ ಆಮದು ಬೆಲೆ ಇಲ್ಲದೇ 8,500 ಮೆಟ್ರಿಕ್ ಟನ್‌ನಷ್ಟು ಹಸಿರು ಅಡಿಕೆಯನ್ನು ಆಮದು ಮಾಡಿಕೊಳ್ಳಬಹುದು ಎಂದು ಹೇಳಿತ್ತು. ಮುಂದಿನ ವರ್ಷದಿಂದ  ಅಂದರೆ 2023-24 ರಿಂದ 17000 ಮೆಟ್ರಿಕ್ ಟನ್ ಆಮದು ಮಾಡಿಕೊಳ್ಳಬಹುದು ಈಗಾಗಲೇ ತಿಳಿಸಲಾಗಿದೆ.  ಇದಕ್ಕಾಗಿ ವಿವಿಧ ನೀತಿಗಳನ್ನು ರೂಪಿಸಲಾಗಿದೆ.

Advertisement

ಈಗ ಆಗಿರುವ ನೀತಿಯಿಂದ ಅಡಿಕೆ ಬೆಳೆಗಾರರಿಗರ ಆತಂಕ ಇದೆ. ಮುಕ್ತ ವ್ಯಾಪಾರ ಒಪ್ಪಂದದ ಪ್ರಕಾರ ಕೆಲವು ದೇಶಗಳಿಂದ ಮುಕ್ತ ವ್ಯಾಪಾರ ವಹಿವಾಟು ನಡೆಸಬಹುದು. ಭಾರತ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವೆ ಆಮದು ಸುಂಕ ಇತ್ಯಾದಿ ಕೆಲವು ನಿಯಮಗಳ ಮೂಲಕ ಆಮದು ಹಾಗೂ ರಫ್ತು ನಡೆಸಬಹುದಾಗಿದೆ. ಈಗ ಅಡಿಕೆ ಆಮದು ಕನಿಷ್ಟ ಬೆಲೆ ಇಲ್ಲದೆಯೇ ಅಡಿಕೆ ಆಮದು ಅವಕಾಶ ನೀಡಿದರೆ ಭವಿಷ್ಯದಲ್ಲಿ ಭಾರತದ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಲಿದೆ ಎನ್ನುವುದು ಕೃಷಿ  ಮಾರುಕಟ್ಟೆ ವಲಯದ ಅಭಿಪ್ರಾಯ. ಸದ್ಯ ಈ ಆಮದು ನಿಯಮಗಳಿಂದ ಅಡಿಕೆ ಬೆಳೆಗಾರರಿಗೆ , ಮಾರುಕಟ್ಟೆಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

18 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

21 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

21 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago