#TomatoPrice| ಟೊಮೆಟೋ ಬೆಲೆ ಏರಿಕೆಗೆ ಸರ್ಕಾರದಿಂದ ಬ್ರೇಕ್ | ಸಬ್ಸಿಡಿ ಹೆಚ್ಚಿಸಿ ಕಿಲೋಗೆ 70 ರೂನಂತೆ ಮಾರಾಟ |

July 21, 2023
11:07 AM
ಟೊಮೆಟೋ  ಬೆಲೆ ಏರಿಕೆಗೆ ಕಡಿವಾಣ ಹಾಕಲು ಸಬ್ಸಿಡಿ ದರದಲ್ಲಿ ಮಾರಾಟ ನಡೆಸುತ್ತಿರುವ ಕೇಂದ್ರ ಸರ್ಕಾರ ಇದೀಗ ಟೊಮೆಟೋ ಸಬ್ಸಿಡಿಯನ್ನುಇನ್ನಷ್ಟು ಹೆಚ್ಚಿಸಿದೆ. ಇದೀಗ ಕಿಲೋಗೆ 70 ರುಪಾಯಿಯಂತೆ ಸರ್ಕಾರದ ವತಿಯಿಂದ ಟೊಮೆಟೋ ಮಾರಾಟವಾಗುತ್ತಿದೆ.

ಕೇಂದ್ರ ಸರ್ಕಾರ ಟೊಮೆಟೋ ಬೆಲೆ ಏರಿರುವುದನ್ನು ಇಳಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ಗಗನಕ್ಕೇರಿದ್ದ ಟೊಮೆಟೋ ಬೆಲೆಯ ಬಿಸಿ ಜನಸಾಮಾನ್ಯರಿಗೆ ಹೆಚ್ಚು ತಾಕದಿರಲೆಂದು ಸರ್ಕಾರ ಸಬ್ಸಿಡಿ ದರದಲ್ಲಿ ಟೊಮೆಟೋ ಮಾರುತ್ತಿದೆ. 70 ರೂಗೆ ಟೊಮೆಟೋ ಮಾರಲಾಗುತ್ತಿದೆ.

ಟೊಮೆಟೋ  ಬೆಲೆ ಏರಿಕೆಗೆ ಕಡಿವಾಣ ಹಾಕಲು ಸಬ್ಸಿಡಿ ದರದಲ್ಲಿ ಮಾರಾಟ ನಡೆಸುತ್ತಿರುವ ಕೇಂದ್ರ ಸರ್ಕಾರ ಇದೀಗ ಟೊಮೆಟೋ ಸಬ್ಸಿಡಿಯನ್ನು ಇನ್ನಷ್ಟು ಹೆಚ್ಚಿಸಿದೆ. ಇದೀಗ ಕಿಲೋಗೆ 70 ರುಪಾಯಿಯಂತೆ ಸರ್ಕಾರದ ವತಿಯಿಂದ ಟೊಮೆಟೋ ಮಾರಾಟವಾಗುತ್ತಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆಯ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಕೃಷಿ ಸಹಕಾರಿ ಮಾರಾಟ ಒಕ್ಕೂಟ  ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಸಂಸ್ಥೆಗಳ ರೀಟೇಲ್ ಔಟ್​ಲೆಟ್​ಗಳ ಮೂಲಕ ಮತ್ತು ಮೊಬೈಲ್ ವ್ಯಾನ್​ಗಳ ಮೂಲಕ ಟೊಮೆಟೋವನ್ನು ಸಬ್ಸಿಡಿ ದರದಲ್ಲಿ ಮಾರಲಾಗುತ್ತಿದೆ. ಬೆಲೆ ಏರಿಕೆ ಹೆಚ್ಚು ಇರುವ ಕಡೆ ಸಬ್ಸಿಡಿ ಟೊಮೆಟೋ ಮಾರಾಟ ಹೆಚ್ಚು ಮಾಡಲಾಗಿದೆ.

ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಲ್ಲಿ ಈ ಸೀಸನ್​ನಲ್ಲಿ ಟೊಮೆಟೋ ಹೆಚ್ಚು ಬೆಳೆಯಲಾಗುತ್ತಿದೆ. ಸರ್ಕಾರದ  ಎನ್​ಸಿಸಿಎಫ್ ಮತ್ತು ಎನ್​ಎಎಫ್​ಇಡಿ ಸಂಸ್ಥೆಗಳು ಈ ರಾಜ್ಯಗಳ ವಿವಿಧ ಮಂಡಿಗಳಿಂದ ಟೊಮೆಟೋ ಖರೀದಿಸಿ ತಮ್ಮ ರೀಟೇಲ್ ಔಟ್​ಲೆಟ್​ಗಳಲ್ಲಿ ಸಬ್ಸಿಡಿ ದರದಲ್ಲಿ ಮಾರುತ್ತಿವೆ. ಅಕ್ಟೋಬರ್​ವರೆಗೂ ದೇಶಾದ್ಯಂತ ಟೊಮೆಟೋ ಬೆಲೆ ತುಸು ಹೆಚ್ಚಿನ ಮಟ್ಟದಲ್ಲೇ ಇರಲಿದೆ. ಅದಾದ ಬಳಿಕ ಟೊಮೆಟೋ ಸರಬರಾಜು ಹೆಚ್ಚುವುದರಿಂದ ಬೆಲೆ ಸಹಜವಾಗಿ ಇಳಿಕೆಯಾಗುವ ಸಾಧ್ಯತೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror