ಸುದ್ದಿಗಳು

#TomatoPrice| ಟೊಮೆಟೋ ಬೆಲೆ ಏರಿಕೆಗೆ ಸರ್ಕಾರದಿಂದ ಬ್ರೇಕ್ | ಸಬ್ಸಿಡಿ ಹೆಚ್ಚಿಸಿ ಕಿಲೋಗೆ 70 ರೂನಂತೆ ಮಾರಾಟ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂದ್ರ ಸರ್ಕಾರ ಟೊಮೆಟೋ ಬೆಲೆ ಏರಿರುವುದನ್ನು ಇಳಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ಗಗನಕ್ಕೇರಿದ್ದ ಟೊಮೆಟೋ ಬೆಲೆಯ ಬಿಸಿ ಜನಸಾಮಾನ್ಯರಿಗೆ ಹೆಚ್ಚು ತಾಕದಿರಲೆಂದು ಸರ್ಕಾರ ಸಬ್ಸಿಡಿ ದರದಲ್ಲಿ ಟೊಮೆಟೋ ಮಾರುತ್ತಿದೆ. 70 ರೂಗೆ ಟೊಮೆಟೋ ಮಾರಲಾಗುತ್ತಿದೆ.

Advertisement

ಟೊಮೆಟೋ  ಬೆಲೆ ಏರಿಕೆಗೆ ಕಡಿವಾಣ ಹಾಕಲು ಸಬ್ಸಿಡಿ ದರದಲ್ಲಿ ಮಾರಾಟ ನಡೆಸುತ್ತಿರುವ ಕೇಂದ್ರ ಸರ್ಕಾರ ಇದೀಗ ಟೊಮೆಟೋ ಸಬ್ಸಿಡಿಯನ್ನು ಇನ್ನಷ್ಟು ಹೆಚ್ಚಿಸಿದೆ. ಇದೀಗ ಕಿಲೋಗೆ 70 ರುಪಾಯಿಯಂತೆ ಸರ್ಕಾರದ ವತಿಯಿಂದ ಟೊಮೆಟೋ ಮಾರಾಟವಾಗುತ್ತಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆಯ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಕೃಷಿ ಸಹಕಾರಿ ಮಾರಾಟ ಒಕ್ಕೂಟ  ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಸಂಸ್ಥೆಗಳ ರೀಟೇಲ್ ಔಟ್​ಲೆಟ್​ಗಳ ಮೂಲಕ ಮತ್ತು ಮೊಬೈಲ್ ವ್ಯಾನ್​ಗಳ ಮೂಲಕ ಟೊಮೆಟೋವನ್ನು ಸಬ್ಸಿಡಿ ದರದಲ್ಲಿ ಮಾರಲಾಗುತ್ತಿದೆ. ಬೆಲೆ ಏರಿಕೆ ಹೆಚ್ಚು ಇರುವ ಕಡೆ ಸಬ್ಸಿಡಿ ಟೊಮೆಟೋ ಮಾರಾಟ ಹೆಚ್ಚು ಮಾಡಲಾಗಿದೆ.

ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಲ್ಲಿ ಈ ಸೀಸನ್​ನಲ್ಲಿ ಟೊಮೆಟೋ ಹೆಚ್ಚು ಬೆಳೆಯಲಾಗುತ್ತಿದೆ. ಸರ್ಕಾರದ  ಎನ್​ಸಿಸಿಎಫ್ ಮತ್ತು ಎನ್​ಎಎಫ್​ಇಡಿ ಸಂಸ್ಥೆಗಳು ಈ ರಾಜ್ಯಗಳ ವಿವಿಧ ಮಂಡಿಗಳಿಂದ ಟೊಮೆಟೋ ಖರೀದಿಸಿ ತಮ್ಮ ರೀಟೇಲ್ ಔಟ್​ಲೆಟ್​ಗಳಲ್ಲಿ ಸಬ್ಸಿಡಿ ದರದಲ್ಲಿ ಮಾರುತ್ತಿವೆ. ಅಕ್ಟೋಬರ್​ವರೆಗೂ ದೇಶಾದ್ಯಂತ ಟೊಮೆಟೋ ಬೆಲೆ ತುಸು ಹೆಚ್ಚಿನ ಮಟ್ಟದಲ್ಲೇ ಇರಲಿದೆ. ಅದಾದ ಬಳಿಕ ಟೊಮೆಟೋ ಸರಬರಾಜು ಹೆಚ್ಚುವುದರಿಂದ ಬೆಲೆ ಸಹಜವಾಗಿ ಇಳಿಕೆಯಾಗುವ ಸಾಧ್ಯತೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

23 hours ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

24 hours ago

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

1 day ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

2 days ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

2 days ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 days ago