Advertisement
ಸುದ್ದಿಗಳು

#TomatoPrice| ಟೊಮೆಟೋ ಬೆಲೆ ಏರಿಕೆಗೆ ಸರ್ಕಾರದಿಂದ ಬ್ರೇಕ್ | ಸಬ್ಸಿಡಿ ಹೆಚ್ಚಿಸಿ ಕಿಲೋಗೆ 70 ರೂನಂತೆ ಮಾರಾಟ |

Share

ಕೇಂದ್ರ ಸರ್ಕಾರ ಟೊಮೆಟೋ ಬೆಲೆ ಏರಿರುವುದನ್ನು ಇಳಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ಗಗನಕ್ಕೇರಿದ್ದ ಟೊಮೆಟೋ ಬೆಲೆಯ ಬಿಸಿ ಜನಸಾಮಾನ್ಯರಿಗೆ ಹೆಚ್ಚು ತಾಕದಿರಲೆಂದು ಸರ್ಕಾರ ಸಬ್ಸಿಡಿ ದರದಲ್ಲಿ ಟೊಮೆಟೋ ಮಾರುತ್ತಿದೆ. 70 ರೂಗೆ ಟೊಮೆಟೋ ಮಾರಲಾಗುತ್ತಿದೆ.

ಟೊಮೆಟೋ  ಬೆಲೆ ಏರಿಕೆಗೆ ಕಡಿವಾಣ ಹಾಕಲು ಸಬ್ಸಿಡಿ ದರದಲ್ಲಿ ಮಾರಾಟ ನಡೆಸುತ್ತಿರುವ ಕೇಂದ್ರ ಸರ್ಕಾರ ಇದೀಗ ಟೊಮೆಟೋ ಸಬ್ಸಿಡಿಯನ್ನು ಇನ್ನಷ್ಟು ಹೆಚ್ಚಿಸಿದೆ. ಇದೀಗ ಕಿಲೋಗೆ 70 ರುಪಾಯಿಯಂತೆ ಸರ್ಕಾರದ ವತಿಯಿಂದ ಟೊಮೆಟೋ ಮಾರಾಟವಾಗುತ್ತಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆಯ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಕೃಷಿ ಸಹಕಾರಿ ಮಾರಾಟ ಒಕ್ಕೂಟ  ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಸಂಸ್ಥೆಗಳ ರೀಟೇಲ್ ಔಟ್​ಲೆಟ್​ಗಳ ಮೂಲಕ ಮತ್ತು ಮೊಬೈಲ್ ವ್ಯಾನ್​ಗಳ ಮೂಲಕ ಟೊಮೆಟೋವನ್ನು ಸಬ್ಸಿಡಿ ದರದಲ್ಲಿ ಮಾರಲಾಗುತ್ತಿದೆ. ಬೆಲೆ ಏರಿಕೆ ಹೆಚ್ಚು ಇರುವ ಕಡೆ ಸಬ್ಸಿಡಿ ಟೊಮೆಟೋ ಮಾರಾಟ ಹೆಚ್ಚು ಮಾಡಲಾಗಿದೆ.

ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಲ್ಲಿ ಈ ಸೀಸನ್​ನಲ್ಲಿ ಟೊಮೆಟೋ ಹೆಚ್ಚು ಬೆಳೆಯಲಾಗುತ್ತಿದೆ. ಸರ್ಕಾರದ  ಎನ್​ಸಿಸಿಎಫ್ ಮತ್ತು ಎನ್​ಎಎಫ್​ಇಡಿ ಸಂಸ್ಥೆಗಳು ಈ ರಾಜ್ಯಗಳ ವಿವಿಧ ಮಂಡಿಗಳಿಂದ ಟೊಮೆಟೋ ಖರೀದಿಸಿ ತಮ್ಮ ರೀಟೇಲ್ ಔಟ್​ಲೆಟ್​ಗಳಲ್ಲಿ ಸಬ್ಸಿಡಿ ದರದಲ್ಲಿ ಮಾರುತ್ತಿವೆ. ಅಕ್ಟೋಬರ್​ವರೆಗೂ ದೇಶಾದ್ಯಂತ ಟೊಮೆಟೋ ಬೆಲೆ ತುಸು ಹೆಚ್ಚಿನ ಮಟ್ಟದಲ್ಲೇ ಇರಲಿದೆ. ಅದಾದ ಬಳಿಕ ಟೊಮೆಟೋ ಸರಬರಾಜು ಹೆಚ್ಚುವುದರಿಂದ ಬೆಲೆ ಸಹಜವಾಗಿ ಇಳಿಕೆಯಾಗುವ ಸಾಧ್ಯತೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

11 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

12 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago