Advertisement
ಸುದ್ದಿಗಳು

#TomatoPrice| ಟೊಮೆಟೋ ಬೆಲೆ ಏರಿಕೆಗೆ ಸರ್ಕಾರದಿಂದ ಬ್ರೇಕ್ | ಸಬ್ಸಿಡಿ ಹೆಚ್ಚಿಸಿ ಕಿಲೋಗೆ 70 ರೂನಂತೆ ಮಾರಾಟ |

Share

ಕೇಂದ್ರ ಸರ್ಕಾರ ಟೊಮೆಟೋ ಬೆಲೆ ಏರಿರುವುದನ್ನು ಇಳಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ ಗಗನಕ್ಕೇರಿದ್ದ ಟೊಮೆಟೋ ಬೆಲೆಯ ಬಿಸಿ ಜನಸಾಮಾನ್ಯರಿಗೆ ಹೆಚ್ಚು ತಾಕದಿರಲೆಂದು ಸರ್ಕಾರ ಸಬ್ಸಿಡಿ ದರದಲ್ಲಿ ಟೊಮೆಟೋ ಮಾರುತ್ತಿದೆ. 70 ರೂಗೆ ಟೊಮೆಟೋ ಮಾರಲಾಗುತ್ತಿದೆ.

ಟೊಮೆಟೋ  ಬೆಲೆ ಏರಿಕೆಗೆ ಕಡಿವಾಣ ಹಾಕಲು ಸಬ್ಸಿಡಿ ದರದಲ್ಲಿ ಮಾರಾಟ ನಡೆಸುತ್ತಿರುವ ಕೇಂದ್ರ ಸರ್ಕಾರ ಇದೀಗ ಟೊಮೆಟೋ ಸಬ್ಸಿಡಿಯನ್ನು ಇನ್ನಷ್ಟು ಹೆಚ್ಚಿಸಿದೆ. ಇದೀಗ ಕಿಲೋಗೆ 70 ರುಪಾಯಿಯಂತೆ ಸರ್ಕಾರದ ವತಿಯಿಂದ ಟೊಮೆಟೋ ಮಾರಾಟವಾಗುತ್ತಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆಯ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಕೃಷಿ ಸಹಕಾರಿ ಮಾರಾಟ ಒಕ್ಕೂಟ  ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಸಂಸ್ಥೆಗಳ ರೀಟೇಲ್ ಔಟ್​ಲೆಟ್​ಗಳ ಮೂಲಕ ಮತ್ತು ಮೊಬೈಲ್ ವ್ಯಾನ್​ಗಳ ಮೂಲಕ ಟೊಮೆಟೋವನ್ನು ಸಬ್ಸಿಡಿ ದರದಲ್ಲಿ ಮಾರಲಾಗುತ್ತಿದೆ. ಬೆಲೆ ಏರಿಕೆ ಹೆಚ್ಚು ಇರುವ ಕಡೆ ಸಬ್ಸಿಡಿ ಟೊಮೆಟೋ ಮಾರಾಟ ಹೆಚ್ಚು ಮಾಡಲಾಗಿದೆ.

ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದಲ್ಲಿ ಈ ಸೀಸನ್​ನಲ್ಲಿ ಟೊಮೆಟೋ ಹೆಚ್ಚು ಬೆಳೆಯಲಾಗುತ್ತಿದೆ. ಸರ್ಕಾರದ  ಎನ್​ಸಿಸಿಎಫ್ ಮತ್ತು ಎನ್​ಎಎಫ್​ಇಡಿ ಸಂಸ್ಥೆಗಳು ಈ ರಾಜ್ಯಗಳ ವಿವಿಧ ಮಂಡಿಗಳಿಂದ ಟೊಮೆಟೋ ಖರೀದಿಸಿ ತಮ್ಮ ರೀಟೇಲ್ ಔಟ್​ಲೆಟ್​ಗಳಲ್ಲಿ ಸಬ್ಸಿಡಿ ದರದಲ್ಲಿ ಮಾರುತ್ತಿವೆ. ಅಕ್ಟೋಬರ್​ವರೆಗೂ ದೇಶಾದ್ಯಂತ ಟೊಮೆಟೋ ಬೆಲೆ ತುಸು ಹೆಚ್ಚಿನ ಮಟ್ಟದಲ್ಲೇ ಇರಲಿದೆ. ಅದಾದ ಬಳಿಕ ಟೊಮೆಟೋ ಸರಬರಾಜು ಹೆಚ್ಚುವುದರಿಂದ ಬೆಲೆ ಸಹಜವಾಗಿ ಇಳಿಕೆಯಾಗುವ ಸಾಧ್ಯತೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

43 minutes ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 hour ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

9 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

18 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 day ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

1 day ago