ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಸರ್ಕಾರ ನಿರ್ದೇಶನ

January 30, 2025
7:19 AM

ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ತಕ್ಷಣವೇ 26 ಕಿಲೋಮೀಟರ್ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 40 ಕೋಟಿ ರೂಪಾಯಿ ಹಣ ಹಂಚಿಕೆ ಮಾಡಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

Advertisement

ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆನೆಗಳು ನಾಡಿಗೆ ಬಂದು ಬೆಳೆಹಾನಿ, ಜೀವಹಾನಿ ಮಾಡುತ್ತಿದ್ದು, ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ. ಜಿಲ್ಲೆಯಲ್ಲಿ ಆನೆ ಸಂಘರ್ಷ ಅತಿ ಹೆಚ್ಚು ಇರುವ 85 ವಿಭಾಗ ಇದ್ದರೆ, ಹೆಚ್ಚಿನ ಸಂಘರ್ಷ ಇರುವ 45 ವಿಭಾಗಗಳಿವೆ. ಮಧ್ಯಮ ಸಂಘರ್ಷದ 40 ವಿಭಾಗಗಳಿವೆ ಹೀಗಾಗಿ, ಆನೆಗಳು ಅರಣ್ಯದಿಂದ ಹೊರಗೆ ಬಂದ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಎಚ್ಚರಿಕೆ ಸಂದೇಶ ರವಾನಿಸಲು ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅರಣ್ಯ ಪ್ರದೇಶದೊಳಗೆ ವನ್ಯಜೀವಿಗಳಿಗೆ ಕುಡಿಯುವ ನೀರು ಮತ್ತು ಆಹಾರದ ಲಭ್ಯತೆಯ ಖಾತ್ರಿ ಪಡಿಸಲು ಕ್ರಮ ವಹಿಸುವಂತೆ ಹೇಳಿದ್ದಾರೆ. ಬೇಸಿಗೆಯಲ್ಲಿ ಕಾವೇರಿ ವನ್ಯಜೀವಿ ಧಾಮ ಸೇರಿದಂತೆ ಜಿಲ್ಲೆಯ ಎಲ್ಲ ಅರಣ್ಯಗಳಲ್ಲಿರುವ ನೀರು ಗುಂಡಿಗಳಲ್ಲಿ ನೀರು ಇರುವಂತೆ ಕ್ರಮ ವಹಿಸಬೇಕು. ಅಗತ್ಯ ಇರುವ ಕಡೆ ಕೊಳವೆಬಾವಿಗಳಿಗೆ ಸೌರ ಪಂಪ್ ಸೆಟ್ ಅಳವಡಿಸಿ ನಿರಂತರವಾಗಿ ನೀರು ಹಾಯಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ. ಇದೇ ವೇಳೆ ಬೇಸಿಗೆಯಲ್ಲಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |
July 9, 2025
1:47 PM
by: ಸಾಯಿಶೇಖರ್ ಕರಿಕಳ
ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |
July 9, 2025
10:57 AM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.
July 9, 2025
7:44 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್
July 9, 2025
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group