ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ತಕ್ಷಣವೇ 26 ಕಿಲೋಮೀಟರ್ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 40 ಕೋಟಿ ರೂಪಾಯಿ ಹಣ ಹಂಚಿಕೆ ಮಾಡಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆನೆಗಳು ನಾಡಿಗೆ ಬಂದು ಬೆಳೆಹಾನಿ, ಜೀವಹಾನಿ ಮಾಡುತ್ತಿದ್ದು, ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ. ಜಿಲ್ಲೆಯಲ್ಲಿ ಆನೆ ಸಂಘರ್ಷ ಅತಿ ಹೆಚ್ಚು ಇರುವ 85 ವಿಭಾಗ ಇದ್ದರೆ, ಹೆಚ್ಚಿನ ಸಂಘರ್ಷ ಇರುವ 45 ವಿಭಾಗಗಳಿವೆ. ಮಧ್ಯಮ ಸಂಘರ್ಷದ 40 ವಿಭಾಗಗಳಿವೆ ಹೀಗಾಗಿ, ಆನೆಗಳು ಅರಣ್ಯದಿಂದ ಹೊರಗೆ ಬಂದ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಎಚ್ಚರಿಕೆ ಸಂದೇಶ ರವಾನಿಸಲು ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅರಣ್ಯ ಪ್ರದೇಶದೊಳಗೆ ವನ್ಯಜೀವಿಗಳಿಗೆ ಕುಡಿಯುವ ನೀರು ಮತ್ತು ಆಹಾರದ ಲಭ್ಯತೆಯ ಖಾತ್ರಿ ಪಡಿಸಲು ಕ್ರಮ ವಹಿಸುವಂತೆ ಹೇಳಿದ್ದಾರೆ. ಬೇಸಿಗೆಯಲ್ಲಿ ಕಾವೇರಿ ವನ್ಯಜೀವಿ ಧಾಮ ಸೇರಿದಂತೆ ಜಿಲ್ಲೆಯ ಎಲ್ಲ ಅರಣ್ಯಗಳಲ್ಲಿರುವ ನೀರು ಗುಂಡಿಗಳಲ್ಲಿ ನೀರು ಇರುವಂತೆ ಕ್ರಮ ವಹಿಸಬೇಕು. ಅಗತ್ಯ ಇರುವ ಕಡೆ ಕೊಳವೆಬಾವಿಗಳಿಗೆ ಸೌರ ಪಂಪ್ ಸೆಟ್ ಅಳವಡಿಸಿ ನಿರಂತರವಾಗಿ ನೀರು ಹಾಯಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ. ಇದೇ ವೇಳೆ ಬೇಸಿಗೆಯಲ್ಲಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…