ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ತಕ್ಷಣವೇ 26 ಕಿಲೋಮೀಟರ್ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 40 ಕೋಟಿ ರೂಪಾಯಿ ಹಣ ಹಂಚಿಕೆ ಮಾಡಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆನೆಗಳು ನಾಡಿಗೆ ಬಂದು ಬೆಳೆಹಾನಿ, ಜೀವಹಾನಿ ಮಾಡುತ್ತಿದ್ದು, ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ. ಜಿಲ್ಲೆಯಲ್ಲಿ ಆನೆ ಸಂಘರ್ಷ ಅತಿ ಹೆಚ್ಚು ಇರುವ 85 ವಿಭಾಗ ಇದ್ದರೆ, ಹೆಚ್ಚಿನ ಸಂಘರ್ಷ ಇರುವ 45 ವಿಭಾಗಗಳಿವೆ. ಮಧ್ಯಮ ಸಂಘರ್ಷದ 40 ವಿಭಾಗಗಳಿವೆ ಹೀಗಾಗಿ, ಆನೆಗಳು ಅರಣ್ಯದಿಂದ ಹೊರಗೆ ಬಂದ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಎಚ್ಚರಿಕೆ ಸಂದೇಶ ರವಾನಿಸಲು ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅರಣ್ಯ ಪ್ರದೇಶದೊಳಗೆ ವನ್ಯಜೀವಿಗಳಿಗೆ ಕುಡಿಯುವ ನೀರು ಮತ್ತು ಆಹಾರದ ಲಭ್ಯತೆಯ ಖಾತ್ರಿ ಪಡಿಸಲು ಕ್ರಮ ವಹಿಸುವಂತೆ ಹೇಳಿದ್ದಾರೆ. ಬೇಸಿಗೆಯಲ್ಲಿ ಕಾವೇರಿ ವನ್ಯಜೀವಿ ಧಾಮ ಸೇರಿದಂತೆ ಜಿಲ್ಲೆಯ ಎಲ್ಲ ಅರಣ್ಯಗಳಲ್ಲಿರುವ ನೀರು ಗುಂಡಿಗಳಲ್ಲಿ ನೀರು ಇರುವಂತೆ ಕ್ರಮ ವಹಿಸಬೇಕು. ಅಗತ್ಯ ಇರುವ ಕಡೆ ಕೊಳವೆಬಾವಿಗಳಿಗೆ ಸೌರ ಪಂಪ್ ಸೆಟ್ ಅಳವಡಿಸಿ ನಿರಂತರವಾಗಿ ನೀರು ಹಾಯಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ. ಇದೇ ವೇಳೆ ಬೇಸಿಗೆಯಲ್ಲಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…