ಒಂದೆಡೆ ರಾಜ್ಯದ ರೈತರು, ಸಾರ್ವಜನಿಕರು, ಸಾಮಾಜಿಕ ಹೋರಾಟಗಾರರು, ಜೀವನದಿ ಕಾವೇರಿ ನೀರನ್ನು ಉಳಿಸಿಕೊಳ್ಳಲು ಪ್ರತಿಭಟನೆ, ಬಂದ್ ಮಾಡ್ತಿದ್ರೆ ಅತ್ತ ರಾಜ್ಯ ಸರ್ಕಾರ ಇದಯಾವುದಕ್ಕೂ ಜಗ್ಗದೆ ತಮಿಳುನಾಡಿಗೆ ನೀರು ಬಿಡುತ್ತಲೇ ಇದೆ. ಕಾವೇರಿ ನೀರು ನಿಯಂತ್ರಣ ಸಮಿತಿಯುಅದೇಶವನ್ನು ಚಾಚೂ ತಪ್ಪದೆ ಪಾಲಿಸುತ್ತಿದೆ.
ಕಾವೇರಿ ನೀರು ಹಂಚಿಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೇ ಅನ್ಯಾಯವಾಗಿದೆ. ಇಂದು ಸಭೆಯೊಂದನ್ನು ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ಮುಂದಿನ 18 ದಿನಗಳ ಕಾಲ ತಮಿಳಿನಾಡುಗೆ ನೀರು ಬಿಡುವಂತೆ ಆದೇಶ ಜಾರಿ ಮಾಡಿದೆ. ದೆಹಲಿಯಲ್ಲಿದು ಸಿಡಬ್ಲ್ಯೂಆರ್ ಸಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತಾಡುವಾಗ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಬಹಳ ಅತಂಕದಲ್ಲಿದ್ದರು. ಇಂದಿನ ಸಭೆಯಲ್ಲಿ ರಾಜ್ಯದ ಪರ ಹಾಜರಿದ್ದ ಅಧಿಕಾರಿಗಳ ನಿಯೋಗದಲ್ಲಿದ್ದ ಮಹೇಶ್, ಕಾವೇರಿ ನೀರು ನಿಯಂತ್ರಣಾ ಸಮಿತಿಯ ಆದೇಶವನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಪ್ರಶ್ನಿಸಲಿದ್ದೇವೆ ಎಂದು ಹೇಳಿದರು. ದಿನಾಂಕಗಳನ್ನು ಪ್ರಾಧಿಕಾರವೇ ಶೆಡ್ಯೂಲ್ ಮಾಡೋದ್ರಿಂದ ಅದರ ಮುಂದೆಯೇ ಸಮಸ್ಯೆ ಇಡುತ್ತೇವೆ, ನೀರು ಬಿಡುವುದು ಸಾಧ್ಯವೇ ಇಲ್ಲ ಅಂತ ಹೇಳಿದರೂ ನೀರು ಬಿಡುವಂತೆ ಆದೇಶಿಸಲಾಗಿದೆ ಎಂದು ಮಹೇಶ್ ಹೇಳಿದರು.
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…