ಒಂದೆಡೆ ರಾಜ್ಯದ ರೈತರು, ಸಾರ್ವಜನಿಕರು, ಸಾಮಾಜಿಕ ಹೋರಾಟಗಾರರು, ಜೀವನದಿ ಕಾವೇರಿ ನೀರನ್ನು ಉಳಿಸಿಕೊಳ್ಳಲು ಪ್ರತಿಭಟನೆ, ಬಂದ್ ಮಾಡ್ತಿದ್ರೆ ಅತ್ತ ರಾಜ್ಯ ಸರ್ಕಾರ ಇದಯಾವುದಕ್ಕೂ ಜಗ್ಗದೆ ತಮಿಳುನಾಡಿಗೆ ನೀರು ಬಿಡುತ್ತಲೇ ಇದೆ. ಕಾವೇರಿ ನೀರು ನಿಯಂತ್ರಣ ಸಮಿತಿಯುಅದೇಶವನ್ನು ಚಾಚೂ ತಪ್ಪದೆ ಪಾಲಿಸುತ್ತಿದೆ.
ಕಾವೇರಿ ನೀರು ಹಂಚಿಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೇ ಅನ್ಯಾಯವಾಗಿದೆ. ಇಂದು ಸಭೆಯೊಂದನ್ನು ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ಮುಂದಿನ 18 ದಿನಗಳ ಕಾಲ ತಮಿಳಿನಾಡುಗೆ ನೀರು ಬಿಡುವಂತೆ ಆದೇಶ ಜಾರಿ ಮಾಡಿದೆ. ದೆಹಲಿಯಲ್ಲಿದು ಸಿಡಬ್ಲ್ಯೂಆರ್ ಸಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತಾಡುವಾಗ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಬಹಳ ಅತಂಕದಲ್ಲಿದ್ದರು. ಇಂದಿನ ಸಭೆಯಲ್ಲಿ ರಾಜ್ಯದ ಪರ ಹಾಜರಿದ್ದ ಅಧಿಕಾರಿಗಳ ನಿಯೋಗದಲ್ಲಿದ್ದ ಮಹೇಶ್, ಕಾವೇರಿ ನೀರು ನಿಯಂತ್ರಣಾ ಸಮಿತಿಯ ಆದೇಶವನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಪ್ರಶ್ನಿಸಲಿದ್ದೇವೆ ಎಂದು ಹೇಳಿದರು. ದಿನಾಂಕಗಳನ್ನು ಪ್ರಾಧಿಕಾರವೇ ಶೆಡ್ಯೂಲ್ ಮಾಡೋದ್ರಿಂದ ಅದರ ಮುಂದೆಯೇ ಸಮಸ್ಯೆ ಇಡುತ್ತೇವೆ, ನೀರು ಬಿಡುವುದು ಸಾಧ್ಯವೇ ಇಲ್ಲ ಅಂತ ಹೇಳಿದರೂ ನೀರು ಬಿಡುವಂತೆ ಆದೇಶಿಸಲಾಗಿದೆ ಎಂದು ಮಹೇಶ್ ಹೇಳಿದರು.
ರಾಷ್ಟ್ರೀಯ ರೈತ ದಿನಾಚರಣೆಯನ್ನು ದಕ್ಷಿಣ ಕನ್ನಡದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಕೃಷಿ ಸಚಿವ ಎನ್.…
ಸಾವಯವ ಕೃಷಿ ಇಂದಿನ ಅವಶ್ಯಕತೆ ಎಂದು ‘ಭಾರತದ ಗ್ರೀನ್ ಹೀರೋ’ ಆರ್.ಕೆ. ನಾಯರ್…
ಬ್ರಹ್ಮಾವರ ಸರ್ಕಾರಿ ಡಿಪ್ಲೋಮಾ ಕೃಷಿ ಕಾಲೇಜನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ…
ಪಿಎಂ ಕುಸುಮ್ ಯೋಜನೆಯಿಂದ ರೈತರ ನೀರಾವರಿ ವೆಚ್ಚ ಕಡಿತ, ಸೌರ ಪಂಪ್ ಬಳಕೆ…
ಅಡಿಕೆ ಸಂಗ್ರಹಣೆಯಲ್ಲಿ ಹುಳು, ಫಂಗಸ್ ಮತ್ತು ಗುಣಮಟ್ಟ ನಷ್ಟ ತಗ್ಗಿಸಲು ವಿಕಿರಣ ತಂತ್ರಜ್ಞಾನ…
ಕರ್ನಾಟಕದಲ್ಲಿ ಶೀತ ಅಲೆ ತೀವ್ರಗೊಂಡಿದ್ದು 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ. ಬೀದರ್ನಲ್ಲಿ…