ಒಂದೆಡೆ ರಾಜ್ಯದ ರೈತರು, ಸಾರ್ವಜನಿಕರು, ಸಾಮಾಜಿಕ ಹೋರಾಟಗಾರರು, ಜೀವನದಿ ಕಾವೇರಿ ನೀರನ್ನು ಉಳಿಸಿಕೊಳ್ಳಲು ಪ್ರತಿಭಟನೆ, ಬಂದ್ ಮಾಡ್ತಿದ್ರೆ ಅತ್ತ ರಾಜ್ಯ ಸರ್ಕಾರ ಇದಯಾವುದಕ್ಕೂ ಜಗ್ಗದೆ ತಮಿಳುನಾಡಿಗೆ ನೀರು ಬಿಡುತ್ತಲೇ ಇದೆ. ಕಾವೇರಿ ನೀರು ನಿಯಂತ್ರಣ ಸಮಿತಿಯುಅದೇಶವನ್ನು ಚಾಚೂ ತಪ್ಪದೆ ಪಾಲಿಸುತ್ತಿದೆ.
ಕಾವೇರಿ ನೀರು ಹಂಚಿಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೇ ಅನ್ಯಾಯವಾಗಿದೆ. ಇಂದು ಸಭೆಯೊಂದನ್ನು ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ಮುಂದಿನ 18 ದಿನಗಳ ಕಾಲ ತಮಿಳಿನಾಡುಗೆ ನೀರು ಬಿಡುವಂತೆ ಆದೇಶ ಜಾರಿ ಮಾಡಿದೆ. ದೆಹಲಿಯಲ್ಲಿದು ಸಿಡಬ್ಲ್ಯೂಆರ್ ಸಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತಾಡುವಾಗ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಬಹಳ ಅತಂಕದಲ್ಲಿದ್ದರು. ಇಂದಿನ ಸಭೆಯಲ್ಲಿ ರಾಜ್ಯದ ಪರ ಹಾಜರಿದ್ದ ಅಧಿಕಾರಿಗಳ ನಿಯೋಗದಲ್ಲಿದ್ದ ಮಹೇಶ್, ಕಾವೇರಿ ನೀರು ನಿಯಂತ್ರಣಾ ಸಮಿತಿಯ ಆದೇಶವನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಪ್ರಶ್ನಿಸಲಿದ್ದೇವೆ ಎಂದು ಹೇಳಿದರು. ದಿನಾಂಕಗಳನ್ನು ಪ್ರಾಧಿಕಾರವೇ ಶೆಡ್ಯೂಲ್ ಮಾಡೋದ್ರಿಂದ ಅದರ ಮುಂದೆಯೇ ಸಮಸ್ಯೆ ಇಡುತ್ತೇವೆ, ನೀರು ಬಿಡುವುದು ಸಾಧ್ಯವೇ ಇಲ್ಲ ಅಂತ ಹೇಳಿದರೂ ನೀರು ಬಿಡುವಂತೆ ಆದೇಶಿಸಲಾಗಿದೆ ಎಂದು ಮಹೇಶ್ ಹೇಳಿದರು.
ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…
ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್ನ ಪ್ರಬಲ ಚಂಡಮಾರುತ…
ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…