ಒಂದೆಡೆ ರಾಜ್ಯದ ರೈತರು, ಸಾರ್ವಜನಿಕರು, ಸಾಮಾಜಿಕ ಹೋರಾಟಗಾರರು, ಜೀವನದಿ ಕಾವೇರಿ ನೀರನ್ನು ಉಳಿಸಿಕೊಳ್ಳಲು ಪ್ರತಿಭಟನೆ, ಬಂದ್ ಮಾಡ್ತಿದ್ರೆ ಅತ್ತ ರಾಜ್ಯ ಸರ್ಕಾರ ಇದಯಾವುದಕ್ಕೂ ಜಗ್ಗದೆ ತಮಿಳುನಾಡಿಗೆ ನೀರು ಬಿಡುತ್ತಲೇ ಇದೆ. ಕಾವೇರಿ ನೀರು ನಿಯಂತ್ರಣ ಸಮಿತಿಯುಅದೇಶವನ್ನು ಚಾಚೂ ತಪ್ಪದೆ ಪಾಲಿಸುತ್ತಿದೆ.
ಕಾವೇರಿ ನೀರು ಹಂಚಿಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೇ ಅನ್ಯಾಯವಾಗಿದೆ. ಇಂದು ಸಭೆಯೊಂದನ್ನು ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ಮುಂದಿನ 18 ದಿನಗಳ ಕಾಲ ತಮಿಳಿನಾಡುಗೆ ನೀರು ಬಿಡುವಂತೆ ಆದೇಶ ಜಾರಿ ಮಾಡಿದೆ. ದೆಹಲಿಯಲ್ಲಿದು ಸಿಡಬ್ಲ್ಯೂಆರ್ ಸಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತಾಡುವಾಗ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಬಹಳ ಅತಂಕದಲ್ಲಿದ್ದರು. ಇಂದಿನ ಸಭೆಯಲ್ಲಿ ರಾಜ್ಯದ ಪರ ಹಾಜರಿದ್ದ ಅಧಿಕಾರಿಗಳ ನಿಯೋಗದಲ್ಲಿದ್ದ ಮಹೇಶ್, ಕಾವೇರಿ ನೀರು ನಿಯಂತ್ರಣಾ ಸಮಿತಿಯ ಆದೇಶವನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಪ್ರಶ್ನಿಸಲಿದ್ದೇವೆ ಎಂದು ಹೇಳಿದರು. ದಿನಾಂಕಗಳನ್ನು ಪ್ರಾಧಿಕಾರವೇ ಶೆಡ್ಯೂಲ್ ಮಾಡೋದ್ರಿಂದ ಅದರ ಮುಂದೆಯೇ ಸಮಸ್ಯೆ ಇಡುತ್ತೇವೆ, ನೀರು ಬಿಡುವುದು ಸಾಧ್ಯವೇ ಇಲ್ಲ ಅಂತ ಹೇಳಿದರೂ ನೀರು ಬಿಡುವಂತೆ ಆದೇಶಿಸಲಾಗಿದೆ ಎಂದು ಮಹೇಶ್ ಹೇಳಿದರು.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…