ಒಂದೆಡೆ ರಾಜ್ಯದ ರೈತರು, ಸಾರ್ವಜನಿಕರು, ಸಾಮಾಜಿಕ ಹೋರಾಟಗಾರರು, ಜೀವನದಿ ಕಾವೇರಿ ನೀರನ್ನು ಉಳಿಸಿಕೊಳ್ಳಲು ಪ್ರತಿಭಟನೆ, ಬಂದ್ ಮಾಡ್ತಿದ್ರೆ ಅತ್ತ ರಾಜ್ಯ ಸರ್ಕಾರ ಇದಯಾವುದಕ್ಕೂ ಜಗ್ಗದೆ ತಮಿಳುನಾಡಿಗೆ ನೀರು ಬಿಡುತ್ತಲೇ ಇದೆ. ಕಾವೇರಿ ನೀರು ನಿಯಂತ್ರಣ ಸಮಿತಿಯುಅದೇಶವನ್ನು ಚಾಚೂ ತಪ್ಪದೆ ಪಾಲಿಸುತ್ತಿದೆ.
ಕಾವೇರಿ ನೀರು ಹಂಚಿಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೇ ಅನ್ಯಾಯವಾಗಿದೆ. ಇಂದು ಸಭೆಯೊಂದನ್ನು ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ಮುಂದಿನ 18 ದಿನಗಳ ಕಾಲ ತಮಿಳಿನಾಡುಗೆ ನೀರು ಬಿಡುವಂತೆ ಆದೇಶ ಜಾರಿ ಮಾಡಿದೆ. ದೆಹಲಿಯಲ್ಲಿದು ಸಿಡಬ್ಲ್ಯೂಆರ್ ಸಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತಾಡುವಾಗ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಬಹಳ ಅತಂಕದಲ್ಲಿದ್ದರು. ಇಂದಿನ ಸಭೆಯಲ್ಲಿ ರಾಜ್ಯದ ಪರ ಹಾಜರಿದ್ದ ಅಧಿಕಾರಿಗಳ ನಿಯೋಗದಲ್ಲಿದ್ದ ಮಹೇಶ್, ಕಾವೇರಿ ನೀರು ನಿಯಂತ್ರಣಾ ಸಮಿತಿಯ ಆದೇಶವನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಪ್ರಶ್ನಿಸಲಿದ್ದೇವೆ ಎಂದು ಹೇಳಿದರು. ದಿನಾಂಕಗಳನ್ನು ಪ್ರಾಧಿಕಾರವೇ ಶೆಡ್ಯೂಲ್ ಮಾಡೋದ್ರಿಂದ ಅದರ ಮುಂದೆಯೇ ಸಮಸ್ಯೆ ಇಡುತ್ತೇವೆ, ನೀರು ಬಿಡುವುದು ಸಾಧ್ಯವೇ ಇಲ್ಲ ಅಂತ ಹೇಳಿದರೂ ನೀರು ಬಿಡುವಂತೆ ಆದೇಶಿಸಲಾಗಿದೆ ಎಂದು ಮಹೇಶ್ ಹೇಳಿದರು.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…