ಕೇಂದ್ರ ಸಚಿವ ಸಂಪುಟ ಮಂಗಳವಾರ 2023-24ರ ಸಾಲಿನ ರಾಬಿ ಬೆಳೆಗಳ ಮೇಲಿನ ಕನಿಷ್ಠ ಬೆಂಬಲ ಬೆಲೆಯನ್ನು (MSP) ಏರಿಸಿದೆ.
ಗೋಧಿಯ ಕನಿಷ್ಠ ಬೆಂಬಲ ಬೆಲೆಯಲ್ಲಿ ಪ್ರತಿ ಕ್ವಿಂಟಾಲ್ಗೆ 110 ರೂ. ಏರಿಸಲಾಗಿದೆ. ಅಂದರೆ 2015 ರೂ.ಗಳಿಂದ 2125 ರೂ.ಗೆ ಏರಿಕೆಯಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಎಂಎಸ್ಪಿ ಎಂದರೆ ಸರ್ಕಾರವು ರೈತರಿಂದ ಖರೀದಿಸುವ ಧಾನ್ಯಗಳಿಗೆ ನೀಡುವ ದರವಾಗಿದೆ. ಪ್ರಸ್ತುತ ಸರ್ಕಾರ 23 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನೀಡುತ್ತದೆ.
ಸಾಸಿವೆಯ ಎಂಎಸ್ಪಿಯಲ್ಲಿ ಕ್ವಿಂಟಾಲ್ಗೆ 400 ರೂ. ಏರಿಸಲಾಗಿದ್ದು, 5,450 ರೂ.ಗೆ ವೃದ್ಧಿಸಲಾಗಿದೆ. ಕೆಂಪು ತೊಗರಿಯ (ಮಸೂರ್) ಎಂಎಸ್ಪಿ ದರದಲ್ಲಿ ಕ್ವಿಂಟಾಲ್ಗೆ 500 ರೂ. ಏರಿಸಲಾಗಿದೆ.
ಬಾರ್ಲಿಯ ಕನಿಷ್ಠ ಬೆಂಬಲ ಬೆಲೆಯಲ್ಲಿ 100 ರೂ. ಹೆಚ್ಚಳವಾಗಿದ್ದು, ಕ್ವಿಂಟಾಲ್ಗೆ 1,635 ರೂ.ಗಳಿಂದ 1,735 ರೂ.ಗೆ ಏರಿಕೆಯಾಗಿದೆ. ಕಡಲೆ ಕಾಳಿನ ಎಂಎಸ್ಪಿಯಲ್ಲಿ 105 ರೂ. ಏರಿಕೆಯಾಗಿದ್ದು, ಕ್ವಿಂಟಾಲ್ಗೆ 5,230 ರೂ.ಗಳಿಂದ 5,335 ರೂ.ಗೆ ವೃದ್ಧಿಸಿದೆ.
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…
ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…
ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ (Artificial Intelligence) AI)ಮೂಲಕ…
ಕೃಷಿ ಉದ್ದೇಶಕ್ಕಾಗಿ ಮಣ್ಣು ಸಾಗಾಟ ಮಾಡುವ ರೈತರಿಗೆ ತೊಂದರೆ ಕೊಡಬಾರದು ಎಂದು ಉಡುಪಿ…