ಕೇಂದ್ರ ಸಚಿವ ಸಂಪುಟ ಮಂಗಳವಾರ 2023-24ರ ಸಾಲಿನ ರಾಬಿ ಬೆಳೆಗಳ ಮೇಲಿನ ಕನಿಷ್ಠ ಬೆಂಬಲ ಬೆಲೆಯನ್ನು (MSP) ಏರಿಸಿದೆ.
ಗೋಧಿಯ ಕನಿಷ್ಠ ಬೆಂಬಲ ಬೆಲೆಯಲ್ಲಿ ಪ್ರತಿ ಕ್ವಿಂಟಾಲ್ಗೆ 110 ರೂ. ಏರಿಸಲಾಗಿದೆ. ಅಂದರೆ 2015 ರೂ.ಗಳಿಂದ 2125 ರೂ.ಗೆ ಏರಿಕೆಯಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಎಂಎಸ್ಪಿ ಎಂದರೆ ಸರ್ಕಾರವು ರೈತರಿಂದ ಖರೀದಿಸುವ ಧಾನ್ಯಗಳಿಗೆ ನೀಡುವ ದರವಾಗಿದೆ. ಪ್ರಸ್ತುತ ಸರ್ಕಾರ 23 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನೀಡುತ್ತದೆ.
ಸಾಸಿವೆಯ ಎಂಎಸ್ಪಿಯಲ್ಲಿ ಕ್ವಿಂಟಾಲ್ಗೆ 400 ರೂ. ಏರಿಸಲಾಗಿದ್ದು, 5,450 ರೂ.ಗೆ ವೃದ್ಧಿಸಲಾಗಿದೆ. ಕೆಂಪು ತೊಗರಿಯ (ಮಸೂರ್) ಎಂಎಸ್ಪಿ ದರದಲ್ಲಿ ಕ್ವಿಂಟಾಲ್ಗೆ 500 ರೂ. ಏರಿಸಲಾಗಿದೆ.
ಬಾರ್ಲಿಯ ಕನಿಷ್ಠ ಬೆಂಬಲ ಬೆಲೆಯಲ್ಲಿ 100 ರೂ. ಹೆಚ್ಚಳವಾಗಿದ್ದು, ಕ್ವಿಂಟಾಲ್ಗೆ 1,635 ರೂ.ಗಳಿಂದ 1,735 ರೂ.ಗೆ ಏರಿಕೆಯಾಗಿದೆ. ಕಡಲೆ ಕಾಳಿನ ಎಂಎಸ್ಪಿಯಲ್ಲಿ 105 ರೂ. ಏರಿಕೆಯಾಗಿದ್ದು, ಕ್ವಿಂಟಾಲ್ಗೆ 5,230 ರೂ.ಗಳಿಂದ 5,335 ರೂ.ಗೆ ವೃದ್ಧಿಸಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…