ಕೇಂದ್ರ ಸಚಿವ ಸಂಪುಟ ಮಂಗಳವಾರ 2023-24ರ ಸಾಲಿನ ರಾಬಿ ಬೆಳೆಗಳ ಮೇಲಿನ ಕನಿಷ್ಠ ಬೆಂಬಲ ಬೆಲೆಯನ್ನು (MSP) ಏರಿಸಿದೆ.
ಗೋಧಿಯ ಕನಿಷ್ಠ ಬೆಂಬಲ ಬೆಲೆಯಲ್ಲಿ ಪ್ರತಿ ಕ್ವಿಂಟಾಲ್ಗೆ 110 ರೂ. ಏರಿಸಲಾಗಿದೆ. ಅಂದರೆ 2015 ರೂ.ಗಳಿಂದ 2125 ರೂ.ಗೆ ಏರಿಕೆಯಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಎಂಎಸ್ಪಿ ಎಂದರೆ ಸರ್ಕಾರವು ರೈತರಿಂದ ಖರೀದಿಸುವ ಧಾನ್ಯಗಳಿಗೆ ನೀಡುವ ದರವಾಗಿದೆ. ಪ್ರಸ್ತುತ ಸರ್ಕಾರ 23 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನೀಡುತ್ತದೆ.
ಸಾಸಿವೆಯ ಎಂಎಸ್ಪಿಯಲ್ಲಿ ಕ್ವಿಂಟಾಲ್ಗೆ 400 ರೂ. ಏರಿಸಲಾಗಿದ್ದು, 5,450 ರೂ.ಗೆ ವೃದ್ಧಿಸಲಾಗಿದೆ. ಕೆಂಪು ತೊಗರಿಯ (ಮಸೂರ್) ಎಂಎಸ್ಪಿ ದರದಲ್ಲಿ ಕ್ವಿಂಟಾಲ್ಗೆ 500 ರೂ. ಏರಿಸಲಾಗಿದೆ.
ಬಾರ್ಲಿಯ ಕನಿಷ್ಠ ಬೆಂಬಲ ಬೆಲೆಯಲ್ಲಿ 100 ರೂ. ಹೆಚ್ಚಳವಾಗಿದ್ದು, ಕ್ವಿಂಟಾಲ್ಗೆ 1,635 ರೂ.ಗಳಿಂದ 1,735 ರೂ.ಗೆ ಏರಿಕೆಯಾಗಿದೆ. ಕಡಲೆ ಕಾಳಿನ ಎಂಎಸ್ಪಿಯಲ್ಲಿ 105 ರೂ. ಏರಿಕೆಯಾಗಿದ್ದು, ಕ್ವಿಂಟಾಲ್ಗೆ 5,230 ರೂ.ಗಳಿಂದ 5,335 ರೂ.ಗೆ ವೃದ್ಧಿಸಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…