ನಟ ಪುನೀತ್ ರಾಜಕುಮಾರ್ ಕನ್ನಡ ಭಾಷೆ, ನಾಡಿಗೆ ದುಡಿದಿದ್ದಾರೆ. ಹೀಗಾಗಿ ಕನ್ನಡ ರಾಜ್ಯೋತ್ಸವದಂದೇ ಕರ್ನಾಟಕ ರತ್ನ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಪುನೀತ್ ರಾಜ್ ಕುಮಾರ್ ಪಾಠವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತ್ರಿವರ್ಣ ಧ್ವಜಾರೋಹಣ ಮಾಡಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಕನ್ನಡ ಧ್ವಜಾರೋಹಣ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಟ ಪುನೀತ್ ರಾಜಕುಮಾರ್ ಗೆ ಕನ್ನಡ ರಾಜ್ಯೋತ್ಸವದಂದೇ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದು ನಮ್ಮ ಬಯಕೆಯಾಗಿತ್ತು. ಶಾಲಾ ಪಠ್ಯದಲ್ಲಿ ಪುನೀತ್ ರಾಜ್ಕುಮಾರ್ ಸಾಧನೆ, ಪ್ರೇರಣೆ ಕುರಿತ ಮಾಹಿತಿ ಸೇರಿಸಬೇಕು ಎನ್ನುವ ಮನವಿಗಳು ಬಂದಿವೆ. ಪಠ್ಯ ಸೇರ್ಪಡೆ ವಿಚಾರ ಸಂಬಂಧ ಹಂತಹಂತವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಏನೆಲ್ಲ ಸಾಧ್ಯವೋ ಎಲ್ಲವನ್ನೂ ಮಾಡುತ್ತೇವೆ ಎಂದು ತಿಳಿಸಿದರು.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…