MIRROR FOCUS

ಒಂದು ಗೋವಿನ ಕಥೆ…. ! | ತುಂಡಾದ ಗೋವಿನ ಕಾಲಿಗೆ ಪ್ಲಾಸ್ಟರ್‌ | 24 ದಿನಗಳಿಂದ ನಿರಂತರ ಚಿಕಿತ್ಸೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೊಂದು ಗೋವಿನ ಕಥೆ. ರಸ್ತೆ ಬದಿಯಲ್ಲಿ ಕಾಲು ಮುರಿದು ಬಿದ್ದ ಸ್ಥಿತಿಯಲ್ಲಿದ್ದ ಹೋರಿಯನ್ನು ಗೋಪ್ರೇಮಿಗಳು ರಕ್ಷಣೆ ಮಾಡಿದ್ದರು. ಇದೀಗ ಈ ಗೋವಿಗೆ ಪ್ಲಾಸ್ಟರ್‌ ಹಾಕಿ ಬ್ಯಾಂಡೇಜ್‌ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಗೋವಿಗೂ ಈಗ ವಿಶ್ರಾಂತಿ. 24 ದಿನಗಳಿಂದ ನಿರಂತರ ಚಿಕಿತ್ಸೆ ಮುಂದುವರಿದಿದೆ.

Advertisement

ಗೋವು ಎಂದರೆ ಪ್ರೀತಿ ಮಾತ್ರವಲ್ಲ ಕೃಷಿಕರಿಗೆ ಅದೊಂದು ಭಾವನಾತ್ಮಕ ಸಂಬಂಧ. ಹಾಗಿದ್ದರೂ ಹೋರಿಗಳು ಕಟುಕರ ಪಾಲಾಗುವುದು ಇದ್ದೇ ಇದೆ. ಅದೇಗೋ ಸುಬ್ರಹ್ಮಣ್ಯದ ಬಳಿ ಕಾಲು ಕಟ್ಟಿದ ಸ್ಥಿತಿಯಲ್ಲಿ ರಸ್ತೆ ಬದಿ ಬಿದ್ದಿದ್ದ ಹೋರಿಯ ಕಾಲು ಮುರಿದುಕೊಂಡಿತ್ತು. ಸ್ಥಳೀಯರು ಹಾಗೂ ಗೋಪ್ರೇಮಿಗಳು ರಕ್ಷಣೆ ಮಾಡಿದರು. ಆ ಬಳಿಕ ಪಶುವೈದ್ಯ ಡಾ.ವೆಂಕಟಾಚಲಪತಿ ಅವರ ಮೂಲಕ ಚಿಕಿತ್ಸೆ ನಡೆಯಿತು.

ಈಗ ಗೋವಿನ ಕಾಲು ಸರಿ ಮಾಡುವುದಕ್ಕೆ ಪ್ಲಾಸ್ಟರ್‌ ಹಾಕಿ ಮಲಗಿಸಲಾಗಿದೆ. ಮನುಷ್ಯರಿಗೆ ಮಾತ್ರವಲ್ಲ ಪ್ರಾಣಿಗೂ ಅತ್ಯಂತ ಚೆನ್ನಾಗಿ ಚಿಕಿತ್ಸೆ ನೀಡಲಾಗುತ್ತಿದೆ. ತುಂಡಾದ ಕಾಲಿಗೆ ಪ್ಲಾಸ್ಟರ್‌ ಹಾಕಿ ಕಾಲು ಕಟ್ಟಲಾಗಿದೆ. ಸದ್ಯ ಸುಬ್ರಹ್ಮಣ್ಯದ ಕಲ ವಿಲೇವಾರಿ ಘಟಕದ ಬಳಿಯಲ್ಲಿ ಆಶ್ರಯ ಪಡೆದಿರುವ ಈ ಹೋರಿಗೆ ಸ್ಥಳೀಯರು ಹುಲ್ಲು, ನೀರು ನೀಡುತ್ತಾರೆ, ಪಶುವೈದ್ಯ ಡಾ.ವೆಂಕಟಾಚಲಪತಿ ನಿತ್ಯವೂ ಆಗಮಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ( ವಿಡಿಯೋ ಇಲ್ಲಿದೆ….. )

 

ಮನುಷ್ಯರಷ್ಟೇ ಕೇರ್‌ ತೆಗೆದುಕೊಂಡು ಚಿಕಿತ್ಸೆ ನೀಡುವುದು ಗೋ ಪ್ರೇಮಿಗಳಿಗೆ ಮಾತ್ರವಲ್ಲ ಪ್ರಾಣಿಗಳಿಗೂ ಬದುಕುವ ಹಕ್ಕಿದೆ ಎನ್ನುವುದನ್ನು ವೈದ್ಯರು ಸಾರಿ ಹೇಳಿದರೆ, ರಕ್ಷಣೆಯ ಬಳಿಕ ನಿತ್ಯವೂ ಹುಲ್ಲು, ನೀರು ನೀಡುವ ಆ ತಂಡ ನಿಜವಾದ ಗೋಸೇವೆಯಲ್ಲಿ ಈಗ ತೊಡಗಿಸಿಕೊಂಡಿದೆ. ಳೆದ 24  ದಿನಗಳಿಂದ ಡಾ.ವೆಂಕಟಾಚಲಪತಿ, ಅಂಬರೀಶ್‌ ಹಾಗೂ ಸ್ಥಳೀಯರಾದ ಶೇಖರ ಸುಬ್ರಹ್ಮಣ್ಯ, ಶರತ್ ಕೊಲ್ಲಮೊಗ್ರ, ಅಶ್ವತ್ಥ್‌ ಬಿಳಿನೆಲೆ  ಸೇವೆ ಮಾಡುತ್ತಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

7 hours ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

8 hours ago

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ

2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…

8 hours ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

18 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

1 day ago