ಗುತ್ತಿಗಾರು: ಗುತ್ತಿಗಾರು ಗ್ರಾಮ ಪಂಚಾಯತ್ ಗೆ ಒಂದನೇ ವಾರ್ಡ್ ನಿಂದ ಆಯ್ಕೆಯಾದ ಗ್ರಾಮಭಾರತ ತಂಡದ ಗ್ರಾ ಪಂ ಸದಸ್ಯರು ಭಾನುವಾರ ವಾರ್ಡ್ ನ ಬಳ್ಳಕ್ಕ ಪ್ರದೇಶದ ಜನರಿಂದ ಅಹವಾಲು ಸ್ವೀಕರಿಸಿದರು. ನೂತನ ಗ್ರಾಪಂ ಸದಸ್ಯರು ಬಳ್ಳಕ್ಕ ಪ್ರದೇಶದ ಗ್ರಾಮೀಣ ಜನರ ಸಮಸ್ಯೆ ಹಾಗೂ ಅಭಿವೃದ್ಧಿ ಪರವಾದ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಿ ಹಂತ ಹಂತವಾಗಿ ಅಬಿವೃದ್ಧಿ ಯೋಜನೆಗಳ ಅನುಷ್ಟಾನಕ್ಕೆ ಎಲ್ಲರ ಸಹಕಾರದೊಂದಿಗೆ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಬಳ್ಳಕ್ಕ ಪ್ರದೇಶದಲ್ಲಿ ಹಲವಾರು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಇದ್ದು ಈ ಬೇಡಿಕೆ ಈಡೇರಿಕೆ ಹಾಗೂ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿದರು. ಬಳ್ಳಕ್ಕ ಪ್ರದೇಶದಲ್ಲಿ ಬಸ್ ನಿಲ್ದಾಣ, ಗುತ್ತಿಗಾರು-ಬಳ್ಳಕ್ಕ-ಪಂಜ ಜಿಪಂ ರಸ್ತೆಯ ಚರಂಡಿ ಮೋರಿ ಬ್ಲಾಕ್ ಆಗಿರುವುದು , ಬಸ್ ಸಮಸ್ಯೆ ಹಾಗೂ ವಿದ್ಯುತ್ ಕಂಬ ಅಪಾಯ ಸ್ಥಿತಿಯಲ್ಲಿರುವುದು,.ಮೊಬೈಲ್ ನೆಟ್ವರ್ಕ್ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳ ಪಟ್ಟಿಯನ್ನು ನೀಡಿದರು.
ಈ ಸಂದರ್ಭ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ, ವಸಂತ ಮೊಗ್ರ ಮೊದಲಾದವರು ಇದ್ದರು.
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel