MIRROR FOCUS

ಸ್ವಂತ ಉದ್ದಿಮೆ ನಡೆಸುತ್ತಿರುವ ಪದವೀಧರ ಮಹಿಳೆ | ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯ ಪಾಸಿಟಿವ್‌ ರಿಸಲ್ಟ್‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಲವಾರು ಮಂದಿ ಮಹಿಳೆಯರು ಸ್ವ ಉದ್ಯೋಗ ಮಾಡುತ್ತಿದ್ದಾರೆ. ಕನಸಿನ ಉದ್ಯಮ ನಡೆಸುತ್ತಿದ್ದಾರೆ. ಆರಂಭದಲ್ಲಿ ಅವರಿಗೆ ಬೆಂಬಲ ಹಾಗೂ ಆರ್ಥಿಕ ನೆರವುಗಳು ಅಗತ್ಯ. ಅಂತಹ ನೆರವಾಗುವ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ ಒಂದು. ಬಾಗಲಕೋಟೆಯಲ್ಲಿ ಯಶಸ್ವಿಯಾಗಿ ಉದ್ಯಮ ನಡೆಸುತ್ತಿರುವ ಪದವೀಧರ ಮಹಿಳೆಯ ಯಶೋಗಾಥೆ ಇದು.

Advertisement

ಬಾಗಲಕೋಟೆಯ ತೇರದಾಳದ ವಿದ್ಯಾ ಶಿವಾನಂದ ಕೋಲೂರುಮಠ ಎಂಬ ಮಹಿಳೆ ಪದವಿ ಶಿಕ್ಷಣ ಪೂರೈಸಿ, ಶಿಕ್ಷಕ ವೃತ್ತಿಯನ್ನು ನಿರ್ವಹಿಸುತ್ತಿದ್ದರು. ಇದೀಗ ಸ್ವಂತ ಉದ್ಯೋಗದ ಮೂಲಕ ಯಶಸ್ಸು ಗಳಿಸುತ್ತಿದ್ದಾರೆ. ವಿದ್ಯಾ ಅವರ ಉದ್ಯಮದ ಕನಸಿಗೆ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ ನೆರವಾಗಿದೆ. ಕೇಂದ್ರ ಸರ್ಕಾರದ  ಯೋಜನೆಯ ಮೂಲಕ 21.5 ಲಕ್ಷ ರೂಪಾಯಿ ಸಹಾಯಧನ ಪಡೆದು ಗಾರ್ಮೆಂಟ್ಸ್ ಉದ್ಯಮವನ್ನು ಆರಂಭಿಸಿ, ವಿವಿಧ ಖಾದಿ ವಸ್ತ್ರಗಳನ್ನು ತಯಾರಿಸುತ್ತಿದ್ದಾರೆ. ವಿದ್ಯಾ ಅವರಿಗೆ ಪತಿ ಹಾಗೂ ಕುಟುಂಬಸ್ಥರು ನೆರವಾಗಿದ್ದು, ಹತ್ತಾರು ಮಹಿಳೆಯರಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿದ್ದಾರೆ. ಇವರು ತಯಾರಿಸುವ ಉತ್ಪನ್ನಗಳನ್ನು ರಾಜ್ಯದ ವಿವಿಧ ಖಾದಿ ಮಳಿಗೆಗಳಿಗೆ ಹಾಗೂ ಅನ್ಯ ರಾಜ್ಯಗಳಿಗೂ ಪೂರೈಕೆ ಮಾಡುತ್ತಿದ್ದಾರೆ.

ಪದವಿ ಶಿಕ್ಷಣದ ಬಳಿಕ ಎರಡು ವರ್ಷ ಶಿಕ್ಷಕಿಯಾಗಿ  ಕಾರ್ಯನಿರ್ವಹಿಸಿದ್ದೆ. ಈ ಸಂದರ್ಭದಲ್ಲಿ ಏನಾದರೊಂದು  ಸ್ವಂತ ಉದ್ಯಮ ಪ್ರಾರಂಭಿಸಬಹುದೇ ಎಂಬ ಆಲೋಚನೆ ಬಂದಾಗ ಮನೆಯವರಿಂದ ಖಾದಿ ಗಾರ್ಮೆಂಟ್ಸ್ ನಡೆಸುವ ಬಗ್ಗೆ ಬೆಂಬಲ ದೊರೆಯಿತು. ಕೇಂದ್ರದ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಅನುದಾನ ಪಡೆದು ಉದ್ಯಮ ಆರಂಭಿಸಿದೆ. ಇದೀಗ ತಮ್ಮ ಉತ್ಪನ್ನಗಳಿಗೆ ಉತ್ತಮ ಬೇಡಿಕೆ ದೊರೆತಿದೆ ಎಂದು  ವಿದ್ಯಾ ಶಿವಾನಂದ ಕೋಲೂರಮಠ ಹೇಳುತ್ತಾರೆ.

ಉದ್ಯಮಕ್ಕೆ ಉತ್ತಮ ಸ್ಪಂದನೆ ದೊರೆತಿದ್ದು, ಕೇಂದ್ರ ಸರ್ಕಾರದ ಯೋಜನೆಯಿಂದ ಬದುಕು ರೂಪಿಸಿಕೊಳ್ಳಲು ಅನುಕೂಲವಾಗಿದೆ ಎನ್ನುತ್ತಾರೆ ವಿದ್ಯಾ ಅವರ ಪತಿ ಶಿವಾನಂದ ಕೋಲೂರಮಠ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…

6 hours ago

ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ

ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ.  ಏಕೆಂದರೆ ಈಗ ಕರ್ಕಾಟಕ…

7 hours ago

ಬದುಕು ಕಲಿಸುವ ಪಾಠಗಳು

ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…

7 hours ago

82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ

ಸಕಲಜೀವಿಗಳ ಆಡುಂಬೊಲ ನಮ್ಮೀ  ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…

7 hours ago

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

15 hours ago