Advertisement
MIRROR FOCUS

ಸ್ವಂತ ಉದ್ದಿಮೆ ನಡೆಸುತ್ತಿರುವ ಪದವೀಧರ ಮಹಿಳೆ | ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯ ಪಾಸಿಟಿವ್‌ ರಿಸಲ್ಟ್‌ |

Share

ಹಲವಾರು ಮಂದಿ ಮಹಿಳೆಯರು ಸ್ವ ಉದ್ಯೋಗ ಮಾಡುತ್ತಿದ್ದಾರೆ. ಕನಸಿನ ಉದ್ಯಮ ನಡೆಸುತ್ತಿದ್ದಾರೆ. ಆರಂಭದಲ್ಲಿ ಅವರಿಗೆ ಬೆಂಬಲ ಹಾಗೂ ಆರ್ಥಿಕ ನೆರವುಗಳು ಅಗತ್ಯ. ಅಂತಹ ನೆರವಾಗುವ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ ಒಂದು. ಬಾಗಲಕೋಟೆಯಲ್ಲಿ ಯಶಸ್ವಿಯಾಗಿ ಉದ್ಯಮ ನಡೆಸುತ್ತಿರುವ ಪದವೀಧರ ಮಹಿಳೆಯ ಯಶೋಗಾಥೆ ಇದು.

ಬಾಗಲಕೋಟೆಯ ತೇರದಾಳದ ವಿದ್ಯಾ ಶಿವಾನಂದ ಕೋಲೂರುಮಠ ಎಂಬ ಮಹಿಳೆ ಪದವಿ ಶಿಕ್ಷಣ ಪೂರೈಸಿ, ಶಿಕ್ಷಕ ವೃತ್ತಿಯನ್ನು ನಿರ್ವಹಿಸುತ್ತಿದ್ದರು. ಇದೀಗ ಸ್ವಂತ ಉದ್ಯೋಗದ ಮೂಲಕ ಯಶಸ್ಸು ಗಳಿಸುತ್ತಿದ್ದಾರೆ. ವಿದ್ಯಾ ಅವರ ಉದ್ಯಮದ ಕನಸಿಗೆ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ ನೆರವಾಗಿದೆ. ಕೇಂದ್ರ ಸರ್ಕಾರದ  ಯೋಜನೆಯ ಮೂಲಕ 21.5 ಲಕ್ಷ ರೂಪಾಯಿ ಸಹಾಯಧನ ಪಡೆದು ಗಾರ್ಮೆಂಟ್ಸ್ ಉದ್ಯಮವನ್ನು ಆರಂಭಿಸಿ, ವಿವಿಧ ಖಾದಿ ವಸ್ತ್ರಗಳನ್ನು ತಯಾರಿಸುತ್ತಿದ್ದಾರೆ. ವಿದ್ಯಾ ಅವರಿಗೆ ಪತಿ ಹಾಗೂ ಕುಟುಂಬಸ್ಥರು ನೆರವಾಗಿದ್ದು, ಹತ್ತಾರು ಮಹಿಳೆಯರಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿದ್ದಾರೆ. ಇವರು ತಯಾರಿಸುವ ಉತ್ಪನ್ನಗಳನ್ನು ರಾಜ್ಯದ ವಿವಿಧ ಖಾದಿ ಮಳಿಗೆಗಳಿಗೆ ಹಾಗೂ ಅನ್ಯ ರಾಜ್ಯಗಳಿಗೂ ಪೂರೈಕೆ ಮಾಡುತ್ತಿದ್ದಾರೆ.

ಪದವಿ ಶಿಕ್ಷಣದ ಬಳಿಕ ಎರಡು ವರ್ಷ ಶಿಕ್ಷಕಿಯಾಗಿ  ಕಾರ್ಯನಿರ್ವಹಿಸಿದ್ದೆ. ಈ ಸಂದರ್ಭದಲ್ಲಿ ಏನಾದರೊಂದು  ಸ್ವಂತ ಉದ್ಯಮ ಪ್ರಾರಂಭಿಸಬಹುದೇ ಎಂಬ ಆಲೋಚನೆ ಬಂದಾಗ ಮನೆಯವರಿಂದ ಖಾದಿ ಗಾರ್ಮೆಂಟ್ಸ್ ನಡೆಸುವ ಬಗ್ಗೆ ಬೆಂಬಲ ದೊರೆಯಿತು. ಕೇಂದ್ರದ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಅನುದಾನ ಪಡೆದು ಉದ್ಯಮ ಆರಂಭಿಸಿದೆ. ಇದೀಗ ತಮ್ಮ ಉತ್ಪನ್ನಗಳಿಗೆ ಉತ್ತಮ ಬೇಡಿಕೆ ದೊರೆತಿದೆ ಎಂದು  ವಿದ್ಯಾ ಶಿವಾನಂದ ಕೋಲೂರಮಠ ಹೇಳುತ್ತಾರೆ.

ಉದ್ಯಮಕ್ಕೆ ಉತ್ತಮ ಸ್ಪಂದನೆ ದೊರೆತಿದ್ದು, ಕೇಂದ್ರ ಸರ್ಕಾರದ ಯೋಜನೆಯಿಂದ ಬದುಕು ರೂಪಿಸಿಕೊಳ್ಳಲು ಅನುಕೂಲವಾಗಿದೆ ಎನ್ನುತ್ತಾರೆ ವಿದ್ಯಾ ಅವರ ಪತಿ ಶಿವಾನಂದ ಕೋಲೂರಮಠ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

11 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

12 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago