Advertisement
MIRROR FOCUS

ಸ್ವಂತ ಉದ್ದಿಮೆ ನಡೆಸುತ್ತಿರುವ ಪದವೀಧರ ಮಹಿಳೆ | ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯ ಪಾಸಿಟಿವ್‌ ರಿಸಲ್ಟ್‌ |

Share

ಹಲವಾರು ಮಂದಿ ಮಹಿಳೆಯರು ಸ್ವ ಉದ್ಯೋಗ ಮಾಡುತ್ತಿದ್ದಾರೆ. ಕನಸಿನ ಉದ್ಯಮ ನಡೆಸುತ್ತಿದ್ದಾರೆ. ಆರಂಭದಲ್ಲಿ ಅವರಿಗೆ ಬೆಂಬಲ ಹಾಗೂ ಆರ್ಥಿಕ ನೆರವುಗಳು ಅಗತ್ಯ. ಅಂತಹ ನೆರವಾಗುವ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ ಒಂದು. ಬಾಗಲಕೋಟೆಯಲ್ಲಿ ಯಶಸ್ವಿಯಾಗಿ ಉದ್ಯಮ ನಡೆಸುತ್ತಿರುವ ಪದವೀಧರ ಮಹಿಳೆಯ ಯಶೋಗಾಥೆ ಇದು.

ಬಾಗಲಕೋಟೆಯ ತೇರದಾಳದ ವಿದ್ಯಾ ಶಿವಾನಂದ ಕೋಲೂರುಮಠ ಎಂಬ ಮಹಿಳೆ ಪದವಿ ಶಿಕ್ಷಣ ಪೂರೈಸಿ, ಶಿಕ್ಷಕ ವೃತ್ತಿಯನ್ನು ನಿರ್ವಹಿಸುತ್ತಿದ್ದರು. ಇದೀಗ ಸ್ವಂತ ಉದ್ಯೋಗದ ಮೂಲಕ ಯಶಸ್ಸು ಗಳಿಸುತ್ತಿದ್ದಾರೆ. ವಿದ್ಯಾ ಅವರ ಉದ್ಯಮದ ಕನಸಿಗೆ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ ನೆರವಾಗಿದೆ. ಕೇಂದ್ರ ಸರ್ಕಾರದ  ಯೋಜನೆಯ ಮೂಲಕ 21.5 ಲಕ್ಷ ರೂಪಾಯಿ ಸಹಾಯಧನ ಪಡೆದು ಗಾರ್ಮೆಂಟ್ಸ್ ಉದ್ಯಮವನ್ನು ಆರಂಭಿಸಿ, ವಿವಿಧ ಖಾದಿ ವಸ್ತ್ರಗಳನ್ನು ತಯಾರಿಸುತ್ತಿದ್ದಾರೆ. ವಿದ್ಯಾ ಅವರಿಗೆ ಪತಿ ಹಾಗೂ ಕುಟುಂಬಸ್ಥರು ನೆರವಾಗಿದ್ದು, ಹತ್ತಾರು ಮಹಿಳೆಯರಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿದ್ದಾರೆ. ಇವರು ತಯಾರಿಸುವ ಉತ್ಪನ್ನಗಳನ್ನು ರಾಜ್ಯದ ವಿವಿಧ ಖಾದಿ ಮಳಿಗೆಗಳಿಗೆ ಹಾಗೂ ಅನ್ಯ ರಾಜ್ಯಗಳಿಗೂ ಪೂರೈಕೆ ಮಾಡುತ್ತಿದ್ದಾರೆ.

ಪದವಿ ಶಿಕ್ಷಣದ ಬಳಿಕ ಎರಡು ವರ್ಷ ಶಿಕ್ಷಕಿಯಾಗಿ  ಕಾರ್ಯನಿರ್ವಹಿಸಿದ್ದೆ. ಈ ಸಂದರ್ಭದಲ್ಲಿ ಏನಾದರೊಂದು  ಸ್ವಂತ ಉದ್ಯಮ ಪ್ರಾರಂಭಿಸಬಹುದೇ ಎಂಬ ಆಲೋಚನೆ ಬಂದಾಗ ಮನೆಯವರಿಂದ ಖಾದಿ ಗಾರ್ಮೆಂಟ್ಸ್ ನಡೆಸುವ ಬಗ್ಗೆ ಬೆಂಬಲ ದೊರೆಯಿತು. ಕೇಂದ್ರದ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಅನುದಾನ ಪಡೆದು ಉದ್ಯಮ ಆರಂಭಿಸಿದೆ. ಇದೀಗ ತಮ್ಮ ಉತ್ಪನ್ನಗಳಿಗೆ ಉತ್ತಮ ಬೇಡಿಕೆ ದೊರೆತಿದೆ ಎಂದು  ವಿದ್ಯಾ ಶಿವಾನಂದ ಕೋಲೂರಮಠ ಹೇಳುತ್ತಾರೆ.

ಉದ್ಯಮಕ್ಕೆ ಉತ್ತಮ ಸ್ಪಂದನೆ ದೊರೆತಿದ್ದು, ಕೇಂದ್ರ ಸರ್ಕಾರದ ಯೋಜನೆಯಿಂದ ಬದುಕು ರೂಪಿಸಿಕೊಳ್ಳಲು ಅನುಕೂಲವಾಗಿದೆ ಎನ್ನುತ್ತಾರೆ ವಿದ್ಯಾ ಅವರ ಪತಿ ಶಿವಾನಂದ ಕೋಲೂರಮಠ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

18 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago