Advertisement
MIRROR FOCUS

ಸ್ವಂತ ಉದ್ದಿಮೆ ನಡೆಸುತ್ತಿರುವ ಪದವೀಧರ ಮಹಿಳೆ | ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯ ಪಾಸಿಟಿವ್‌ ರಿಸಲ್ಟ್‌ |

Share

ಹಲವಾರು ಮಂದಿ ಮಹಿಳೆಯರು ಸ್ವ ಉದ್ಯೋಗ ಮಾಡುತ್ತಿದ್ದಾರೆ. ಕನಸಿನ ಉದ್ಯಮ ನಡೆಸುತ್ತಿದ್ದಾರೆ. ಆರಂಭದಲ್ಲಿ ಅವರಿಗೆ ಬೆಂಬಲ ಹಾಗೂ ಆರ್ಥಿಕ ನೆರವುಗಳು ಅಗತ್ಯ. ಅಂತಹ ನೆರವಾಗುವ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ ಒಂದು. ಬಾಗಲಕೋಟೆಯಲ್ಲಿ ಯಶಸ್ವಿಯಾಗಿ ಉದ್ಯಮ ನಡೆಸುತ್ತಿರುವ ಪದವೀಧರ ಮಹಿಳೆಯ ಯಶೋಗಾಥೆ ಇದು.

ಬಾಗಲಕೋಟೆಯ ತೇರದಾಳದ ವಿದ್ಯಾ ಶಿವಾನಂದ ಕೋಲೂರುಮಠ ಎಂಬ ಮಹಿಳೆ ಪದವಿ ಶಿಕ್ಷಣ ಪೂರೈಸಿ, ಶಿಕ್ಷಕ ವೃತ್ತಿಯನ್ನು ನಿರ್ವಹಿಸುತ್ತಿದ್ದರು. ಇದೀಗ ಸ್ವಂತ ಉದ್ಯೋಗದ ಮೂಲಕ ಯಶಸ್ಸು ಗಳಿಸುತ್ತಿದ್ದಾರೆ. ವಿದ್ಯಾ ಅವರ ಉದ್ಯಮದ ಕನಸಿಗೆ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ ನೆರವಾಗಿದೆ. ಕೇಂದ್ರ ಸರ್ಕಾರದ  ಯೋಜನೆಯ ಮೂಲಕ 21.5 ಲಕ್ಷ ರೂಪಾಯಿ ಸಹಾಯಧನ ಪಡೆದು ಗಾರ್ಮೆಂಟ್ಸ್ ಉದ್ಯಮವನ್ನು ಆರಂಭಿಸಿ, ವಿವಿಧ ಖಾದಿ ವಸ್ತ್ರಗಳನ್ನು ತಯಾರಿಸುತ್ತಿದ್ದಾರೆ. ವಿದ್ಯಾ ಅವರಿಗೆ ಪತಿ ಹಾಗೂ ಕುಟುಂಬಸ್ಥರು ನೆರವಾಗಿದ್ದು, ಹತ್ತಾರು ಮಹಿಳೆಯರಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿದ್ದಾರೆ. ಇವರು ತಯಾರಿಸುವ ಉತ್ಪನ್ನಗಳನ್ನು ರಾಜ್ಯದ ವಿವಿಧ ಖಾದಿ ಮಳಿಗೆಗಳಿಗೆ ಹಾಗೂ ಅನ್ಯ ರಾಜ್ಯಗಳಿಗೂ ಪೂರೈಕೆ ಮಾಡುತ್ತಿದ್ದಾರೆ.

ಪದವಿ ಶಿಕ್ಷಣದ ಬಳಿಕ ಎರಡು ವರ್ಷ ಶಿಕ್ಷಕಿಯಾಗಿ  ಕಾರ್ಯನಿರ್ವಹಿಸಿದ್ದೆ. ಈ ಸಂದರ್ಭದಲ್ಲಿ ಏನಾದರೊಂದು  ಸ್ವಂತ ಉದ್ಯಮ ಪ್ರಾರಂಭಿಸಬಹುದೇ ಎಂಬ ಆಲೋಚನೆ ಬಂದಾಗ ಮನೆಯವರಿಂದ ಖಾದಿ ಗಾರ್ಮೆಂಟ್ಸ್ ನಡೆಸುವ ಬಗ್ಗೆ ಬೆಂಬಲ ದೊರೆಯಿತು. ಕೇಂದ್ರದ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಅನುದಾನ ಪಡೆದು ಉದ್ಯಮ ಆರಂಭಿಸಿದೆ. ಇದೀಗ ತಮ್ಮ ಉತ್ಪನ್ನಗಳಿಗೆ ಉತ್ತಮ ಬೇಡಿಕೆ ದೊರೆತಿದೆ ಎಂದು  ವಿದ್ಯಾ ಶಿವಾನಂದ ಕೋಲೂರಮಠ ಹೇಳುತ್ತಾರೆ.

ಉದ್ಯಮಕ್ಕೆ ಉತ್ತಮ ಸ್ಪಂದನೆ ದೊರೆತಿದ್ದು, ಕೇಂದ್ರ ಸರ್ಕಾರದ ಯೋಜನೆಯಿಂದ ಬದುಕು ರೂಪಿಸಿಕೊಳ್ಳಲು ಅನುಕೂಲವಾಗಿದೆ ಎನ್ನುತ್ತಾರೆ ವಿದ್ಯಾ ಅವರ ಪತಿ ಶಿವಾನಂದ ಕೋಲೂರಮಠ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

3 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

4 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

7 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

18 hours ago