Advertisement
MIRROR FOCUS

ಸ್ವಂತ ಉದ್ದಿಮೆ ನಡೆಸುತ್ತಿರುವ ಪದವೀಧರ ಮಹಿಳೆ | ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯ ಪಾಸಿಟಿವ್‌ ರಿಸಲ್ಟ್‌ |

Share

ಹಲವಾರು ಮಂದಿ ಮಹಿಳೆಯರು ಸ್ವ ಉದ್ಯೋಗ ಮಾಡುತ್ತಿದ್ದಾರೆ. ಕನಸಿನ ಉದ್ಯಮ ನಡೆಸುತ್ತಿದ್ದಾರೆ. ಆರಂಭದಲ್ಲಿ ಅವರಿಗೆ ಬೆಂಬಲ ಹಾಗೂ ಆರ್ಥಿಕ ನೆರವುಗಳು ಅಗತ್ಯ. ಅಂತಹ ನೆರವಾಗುವ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ ಒಂದು. ಬಾಗಲಕೋಟೆಯಲ್ಲಿ ಯಶಸ್ವಿಯಾಗಿ ಉದ್ಯಮ ನಡೆಸುತ್ತಿರುವ ಪದವೀಧರ ಮಹಿಳೆಯ ಯಶೋಗಾಥೆ ಇದು.

ಬಾಗಲಕೋಟೆಯ ತೇರದಾಳದ ವಿದ್ಯಾ ಶಿವಾನಂದ ಕೋಲೂರುಮಠ ಎಂಬ ಮಹಿಳೆ ಪದವಿ ಶಿಕ್ಷಣ ಪೂರೈಸಿ, ಶಿಕ್ಷಕ ವೃತ್ತಿಯನ್ನು ನಿರ್ವಹಿಸುತ್ತಿದ್ದರು. ಇದೀಗ ಸ್ವಂತ ಉದ್ಯೋಗದ ಮೂಲಕ ಯಶಸ್ಸು ಗಳಿಸುತ್ತಿದ್ದಾರೆ. ವಿದ್ಯಾ ಅವರ ಉದ್ಯಮದ ಕನಸಿಗೆ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ ನೆರವಾಗಿದೆ. ಕೇಂದ್ರ ಸರ್ಕಾರದ  ಯೋಜನೆಯ ಮೂಲಕ 21.5 ಲಕ್ಷ ರೂಪಾಯಿ ಸಹಾಯಧನ ಪಡೆದು ಗಾರ್ಮೆಂಟ್ಸ್ ಉದ್ಯಮವನ್ನು ಆರಂಭಿಸಿ, ವಿವಿಧ ಖಾದಿ ವಸ್ತ್ರಗಳನ್ನು ತಯಾರಿಸುತ್ತಿದ್ದಾರೆ. ವಿದ್ಯಾ ಅವರಿಗೆ ಪತಿ ಹಾಗೂ ಕುಟುಂಬಸ್ಥರು ನೆರವಾಗಿದ್ದು, ಹತ್ತಾರು ಮಹಿಳೆಯರಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿದ್ದಾರೆ. ಇವರು ತಯಾರಿಸುವ ಉತ್ಪನ್ನಗಳನ್ನು ರಾಜ್ಯದ ವಿವಿಧ ಖಾದಿ ಮಳಿಗೆಗಳಿಗೆ ಹಾಗೂ ಅನ್ಯ ರಾಜ್ಯಗಳಿಗೂ ಪೂರೈಕೆ ಮಾಡುತ್ತಿದ್ದಾರೆ.

ಪದವಿ ಶಿಕ್ಷಣದ ಬಳಿಕ ಎರಡು ವರ್ಷ ಶಿಕ್ಷಕಿಯಾಗಿ  ಕಾರ್ಯನಿರ್ವಹಿಸಿದ್ದೆ. ಈ ಸಂದರ್ಭದಲ್ಲಿ ಏನಾದರೊಂದು  ಸ್ವಂತ ಉದ್ಯಮ ಪ್ರಾರಂಭಿಸಬಹುದೇ ಎಂಬ ಆಲೋಚನೆ ಬಂದಾಗ ಮನೆಯವರಿಂದ ಖಾದಿ ಗಾರ್ಮೆಂಟ್ಸ್ ನಡೆಸುವ ಬಗ್ಗೆ ಬೆಂಬಲ ದೊರೆಯಿತು. ಕೇಂದ್ರದ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಅನುದಾನ ಪಡೆದು ಉದ್ಯಮ ಆರಂಭಿಸಿದೆ. ಇದೀಗ ತಮ್ಮ ಉತ್ಪನ್ನಗಳಿಗೆ ಉತ್ತಮ ಬೇಡಿಕೆ ದೊರೆತಿದೆ ಎಂದು  ವಿದ್ಯಾ ಶಿವಾನಂದ ಕೋಲೂರಮಠ ಹೇಳುತ್ತಾರೆ.

ಉದ್ಯಮಕ್ಕೆ ಉತ್ತಮ ಸ್ಪಂದನೆ ದೊರೆತಿದ್ದು, ಕೇಂದ್ರ ಸರ್ಕಾರದ ಯೋಜನೆಯಿಂದ ಬದುಕು ರೂಪಿಸಿಕೊಳ್ಳಲು ಅನುಕೂಲವಾಗಿದೆ ಎನ್ನುತ್ತಾರೆ ವಿದ್ಯಾ ಅವರ ಪತಿ ಶಿವಾನಂದ ಕೋಲೂರಮಠ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

30 seconds ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

11 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

15 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

17 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

19 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

19 hours ago