Advertisement
MIRROR FOCUS

ರಾಜಕೀಯ ದ್ವೇಷಕ್ಕೆ ಮಕ್ಕಳ ಯಕ್ಷಗಾನ ಅರ್ಧಕ್ಕೆ ನಿಲ್ಲಿಸಿದ ಆ ಮಹಾಶಯ ಯಾರು..? | ಕಲೆಯ ಮೇಲೂ ರಾಜಕೀಯ ವಕ್ರದೃಷ್ಠಿ..!

Share

ಕಲೆಗೆ ಎಲ್ಲೆ ಇಲ್ಲ. ಅದು ಯಾರ ಸೊತ್ತು ಅಲ್ಲ. ಅದರಲ್ಲೂ ಕಲೆಯನ್ನು ಉಳಿಸಬೇಕಾದವರು ನಮ್ಮ ಮುಂದಿನ ಮಕ್ಕಳು(Children). ಅವರಿಗೆ ಈಗಿನಿಂದಲೇ ಅದರ ಬಗ್ಗೆ ಪರಿಚಯ, ಅಭಿನಯ, ತಾಲೀಮು ಮಾಡಿಸಿದರಷ್ಟೇ ಅವರು ಅದನ್ನು ಮುಂದುವರೆಸಿಕೊಂಡು ಹೋಗಲು ಸಾಧ್ಯ. ಅದಕ್ಕೆ ಮುಖ್ಯವಾಗಿ ಬೇಕಾದದ್ದು ಹಿರಿಯರ ಸಹಕಾರ. ಆದರೆ ಇಲ್ಲೊಂದು ಕಡೆ ರಾಜಕೀಯ(political) ವೈಷಮ್ಯಕ್ಕೆ ಕಲೆಯನ್ನೇ ನುಂಗಿ ಹಾಕಿ ಸಣ್ಣ ಮಕ್ಕಳಿಗೆ, ಕಲಾವಿದರಿಗೆ(Artists), ಕಲಾಭಿಮಾನಿಗಳಿಗೆ ಅವಮಾನ ಮಾಡಿದ ಘಟನೆ ನಡೆದಿದೆ.

ಕುಂದಾಪುರ(Kundapura) ತಾಲೂಕು ಹೇರಿಕುದ್ರುನಲ್ಲಿ ನಡೆಯುತ್ತಿದ್ದ ಮಕ್ಕಳ ಯಕ್ಷಗಾನವನ್ನು(Yakshagana) ನಿಲ್ಲಿಸಿದ ರಾಜಕೀಯ ಕಾರ್ಯಕರ್ತರು. ರಾಜಕೀಯವನ್ನು ಇಂತಹ ವಿಚಾರದಲ್ಲಿ ತರುವುದು ಸರಿಯೇ? ಮಕ್ಕಳ ಹಾಗೂ ಅವರ ಕುಟುಬದವರಿಗೆ ಎಸ್ಟು ನೋವಾಗಿರಬಹುದು.? ಆರಕ್ಷಕರು ಉದಯ ಪೂಜಾರಿ ಹೆರಿಕುದ್ರು  ದೂರು ಬಂದಿರುವುದಾಗಿ ತಿಳಿಸಿದರು. ಮಹಾಂಕಲಿ ದೇವಸ್ಥಾನದ ಅರ್ಚಕ ಸ್ಥಾನದಲ್ಲಿರುವ ಇವರು ಇಂತ ಹೀನ ಕೆಲಸ ಮಾಡುವುದು ಸರಿಯೇ?

ರಾಜಕೀಯ ವೈಷಮ್ಯ ಹಿನ್ನೆಲೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಕ್ಕಳ ಯಕ್ಷಗಾನ ಅರ್ಧಕ್ಕೆ ನಿಲ್ಲಿಸಿರುವಂತಹ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಹೇರಿಕುದ್ರುವಿನಲ್ಲಿ ನಡೆದಿದೆ. ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯಿಂದ ಮಕ್ಕಳ ಯಕ್ಷಗಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕುಂದಾಪುರ ಪೊಲೀಸ್ ಠಾಣೆಗೆ ಆನೆಗಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉದಯ ಪೂಜಾರಿ ದೂರು ನೀಡಿದ್ದರು. ದೂರಿನ ಹಿನ್ನಲೆ ಪೊಲೀಸರು ಮಕ್ಕಳ ಯಕ್ಷಗಾನವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. ರಾತ್ರಿ 10:30 ರ ವರೆಗೆ ಯಕ್ಷಗಾನ ನಡೆಸಲು ಸಮಿತಿ ಅನುಮತಿ ಪಡೆದಿದ್ದು, ಆದರೆ ಸಮಯ ಮೀರುತ್ತಿದ್ದಂತೆ ಉದಯ ಪೂಜಾರಿ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.

ಯಕ್ಷಗಾನದಲ್ಲಿ ಭಾಗವಹಿಸಬೇಕಿದ್ದ ಭಾಗವತರ ಅನಾರೋಗ್ಯದಿಂದ ವಿಳಂಬವಾಗಿದ್ದು, ಒಂದು ಗಂಟೆ ತಡವಾಗಿ ಕಾರ್ಯಕ್ರಮ ಪ್ರಾರಂಭವಾಗಿದೆ. ಅವಧಿ ಮುಗಿದ ಬಳಿಕ ಯಕ್ಷಗಾನ ನಡೆಸುತ್ತಿರುವ ಕುರಿತು ಉದಯ ಪೂಜಾರಿಯಿಂದ ದೂರು ನೀಡಿದ್ದು, ರಾಜಕೀಯ ಪ್ರೇರಿತವಾಗಿ ಯಕ್ಷಗಾನ ನಿಲ್ಲಿಸುವ ಯತ್ನ ನಡೆಯುತ್ತಿರುವ ಕುರಿತು ಆಯೋಜಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಕಲೆಯನ್ನು ಉಳಿಸುವಲ್ಲಿ ಎಲ್ಲರು ಸಹಕರಿಸಬೇಕು. ನಮ್ಮ ಮಕ್ಕಳು ಇಂಮಥ ಕಲೆಯನ್ನು ಅಭಿನಯಿಸುತ್ತಿರುವಾಗ ಅದಕ್ಕೆ ಅಡ್ಡಿ ಪಡಿಸಿರುವುದು ಖೇದಕರ ಸಂಗತಿ. ನಮ್ಮ ತುಳುನಾಡಿನ ಸಂಸ್ಕೃತಿಯನ್ನು ಬೆಳೆಸಲು ನಾವೇ ಮುಂದು ಬರದಿದ್ದರೆ ಮುಂದೆ ನಮ್ಮ ಕಲೆ ಬೆಳೆಯುವುದಿಲ್ಲ. ಇಂತವರು ಇರುವವರೆಗೆ ನಾಟಕ, ಯಕ್ಷಗಾನ ಮಾಡುವುದು ಬಹಳ ಕಷ್ಟ ಇದೆ ಎಂದು ಈ ಕುರಿತು ಬೇಸರ ವ್ಯಕ್ತಪಡಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

4 hours ago

ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ

ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…

5 hours ago

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

12 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

21 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

2 days ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

2 days ago