Advertisement
MIRROR FOCUS

ರಾಜಕೀಯ ದ್ವೇಷಕ್ಕೆ ಮಕ್ಕಳ ಯಕ್ಷಗಾನ ಅರ್ಧಕ್ಕೆ ನಿಲ್ಲಿಸಿದ ಆ ಮಹಾಶಯ ಯಾರು..? | ಕಲೆಯ ಮೇಲೂ ರಾಜಕೀಯ ವಕ್ರದೃಷ್ಠಿ..!

Share

ಕಲೆಗೆ ಎಲ್ಲೆ ಇಲ್ಲ. ಅದು ಯಾರ ಸೊತ್ತು ಅಲ್ಲ. ಅದರಲ್ಲೂ ಕಲೆಯನ್ನು ಉಳಿಸಬೇಕಾದವರು ನಮ್ಮ ಮುಂದಿನ ಮಕ್ಕಳು(Children). ಅವರಿಗೆ ಈಗಿನಿಂದಲೇ ಅದರ ಬಗ್ಗೆ ಪರಿಚಯ, ಅಭಿನಯ, ತಾಲೀಮು ಮಾಡಿಸಿದರಷ್ಟೇ ಅವರು ಅದನ್ನು ಮುಂದುವರೆಸಿಕೊಂಡು ಹೋಗಲು ಸಾಧ್ಯ. ಅದಕ್ಕೆ ಮುಖ್ಯವಾಗಿ ಬೇಕಾದದ್ದು ಹಿರಿಯರ ಸಹಕಾರ. ಆದರೆ ಇಲ್ಲೊಂದು ಕಡೆ ರಾಜಕೀಯ(political) ವೈಷಮ್ಯಕ್ಕೆ ಕಲೆಯನ್ನೇ ನುಂಗಿ ಹಾಕಿ ಸಣ್ಣ ಮಕ್ಕಳಿಗೆ, ಕಲಾವಿದರಿಗೆ(Artists), ಕಲಾಭಿಮಾನಿಗಳಿಗೆ ಅವಮಾನ ಮಾಡಿದ ಘಟನೆ ನಡೆದಿದೆ.

ಕುಂದಾಪುರ(Kundapura) ತಾಲೂಕು ಹೇರಿಕುದ್ರುನಲ್ಲಿ ನಡೆಯುತ್ತಿದ್ದ ಮಕ್ಕಳ ಯಕ್ಷಗಾನವನ್ನು(Yakshagana) ನಿಲ್ಲಿಸಿದ ರಾಜಕೀಯ ಕಾರ್ಯಕರ್ತರು. ರಾಜಕೀಯವನ್ನು ಇಂತಹ ವಿಚಾರದಲ್ಲಿ ತರುವುದು ಸರಿಯೇ? ಮಕ್ಕಳ ಹಾಗೂ ಅವರ ಕುಟುಬದವರಿಗೆ ಎಸ್ಟು ನೋವಾಗಿರಬಹುದು.? ಆರಕ್ಷಕರು ಉದಯ ಪೂಜಾರಿ ಹೆರಿಕುದ್ರು  ದೂರು ಬಂದಿರುವುದಾಗಿ ತಿಳಿಸಿದರು. ಮಹಾಂಕಲಿ ದೇವಸ್ಥಾನದ ಅರ್ಚಕ ಸ್ಥಾನದಲ್ಲಿರುವ ಇವರು ಇಂತ ಹೀನ ಕೆಲಸ ಮಾಡುವುದು ಸರಿಯೇ?

ರಾಜಕೀಯ ವೈಷಮ್ಯ ಹಿನ್ನೆಲೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಕ್ಕಳ ಯಕ್ಷಗಾನ ಅರ್ಧಕ್ಕೆ ನಿಲ್ಲಿಸಿರುವಂತಹ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಹೇರಿಕುದ್ರುವಿನಲ್ಲಿ ನಡೆದಿದೆ. ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯಿಂದ ಮಕ್ಕಳ ಯಕ್ಷಗಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕುಂದಾಪುರ ಪೊಲೀಸ್ ಠಾಣೆಗೆ ಆನೆಗಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉದಯ ಪೂಜಾರಿ ದೂರು ನೀಡಿದ್ದರು. ದೂರಿನ ಹಿನ್ನಲೆ ಪೊಲೀಸರು ಮಕ್ಕಳ ಯಕ್ಷಗಾನವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. ರಾತ್ರಿ 10:30 ರ ವರೆಗೆ ಯಕ್ಷಗಾನ ನಡೆಸಲು ಸಮಿತಿ ಅನುಮತಿ ಪಡೆದಿದ್ದು, ಆದರೆ ಸಮಯ ಮೀರುತ್ತಿದ್ದಂತೆ ಉದಯ ಪೂಜಾರಿ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.

ಯಕ್ಷಗಾನದಲ್ಲಿ ಭಾಗವಹಿಸಬೇಕಿದ್ದ ಭಾಗವತರ ಅನಾರೋಗ್ಯದಿಂದ ವಿಳಂಬವಾಗಿದ್ದು, ಒಂದು ಗಂಟೆ ತಡವಾಗಿ ಕಾರ್ಯಕ್ರಮ ಪ್ರಾರಂಭವಾಗಿದೆ. ಅವಧಿ ಮುಗಿದ ಬಳಿಕ ಯಕ್ಷಗಾನ ನಡೆಸುತ್ತಿರುವ ಕುರಿತು ಉದಯ ಪೂಜಾರಿಯಿಂದ ದೂರು ನೀಡಿದ್ದು, ರಾಜಕೀಯ ಪ್ರೇರಿತವಾಗಿ ಯಕ್ಷಗಾನ ನಿಲ್ಲಿಸುವ ಯತ್ನ ನಡೆಯುತ್ತಿರುವ ಕುರಿತು ಆಯೋಜಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಕಲೆಯನ್ನು ಉಳಿಸುವಲ್ಲಿ ಎಲ್ಲರು ಸಹಕರಿಸಬೇಕು. ನಮ್ಮ ಮಕ್ಕಳು ಇಂಮಥ ಕಲೆಯನ್ನು ಅಭಿನಯಿಸುತ್ತಿರುವಾಗ ಅದಕ್ಕೆ ಅಡ್ಡಿ ಪಡಿಸಿರುವುದು ಖೇದಕರ ಸಂಗತಿ. ನಮ್ಮ ತುಳುನಾಡಿನ ಸಂಸ್ಕೃತಿಯನ್ನು ಬೆಳೆಸಲು ನಾವೇ ಮುಂದು ಬರದಿದ್ದರೆ ಮುಂದೆ ನಮ್ಮ ಕಲೆ ಬೆಳೆಯುವುದಿಲ್ಲ. ಇಂತವರು ಇರುವವರೆಗೆ ನಾಟಕ, ಯಕ್ಷಗಾನ ಮಾಡುವುದು ಬಹಳ ಕಷ್ಟ ಇದೆ ಎಂದು ಈ ಕುರಿತು ಬೇಸರ ವ್ಯಕ್ತಪಡಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

6 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

24 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago