ಸುದ್ದಿಗಳು

ಗ್ರಾಮೀಣ ಭಾರತ ನಿರ್ಮಾಣವಾಗಲಿ | ಮಹಾತ್ಮ ಗಾಂಧೀಜಿಯವರ ಮಾತು ಗ್ರಾಮೀಣ ಭಾರತ ನಿಜವಾದ ಭಾರತ | ಧರ್ಮಗುರು ಫಾ.ಆದರ್ಶ್ ಜೋಸೆಫ್ ಬರೆಯುತ್ತಾರೆ…|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಆಜಾದಿ ಕಾ ಅಮೃತಮಹೋತ್ಸವ ಹಾಗೂ ಗ್ರಾಮೀಣ ಭಾರತದ ಬಗ್ಗೆ ಕಲ್ಪನೆಯ ಬಗ್ಗೆ ಸುಳ್ಯ ತಾಲೂಕಿನ ಗುತ್ತಿಗಾರಿನ ಸೈಂಟ್ ಮೇರಿಸ್ ಚರ್ಚ್ ಧರ್ಮಗುರು  ಫಾ. ಆದರ್ಶ್ ಜೋಸೆಫ್ ಅವರು ಬರೆದಿದ್ದಾರೆ. ಸಾಮಾಜಿಕ ಕಾರ್ಯಕರ್ತರೂ ಆಗಿರುವ ಆದರ್ಶ್‌ ಜೋಸೆಫ್‌ ಅವರು ಗ್ರಾಮೀಣ ಭಾರತದ, ಸಾಮಾಜಿಕ ಕಾರ್ಯಗಳ ಹಿನ್ನೆಲೆಯಲ್ಲಿ ಬರೆದಿದ್ದಾರೆ.

ನಮ್ಮ ದೇಶದ ಪ್ರಧಾನ ಮಂತ್ರಿಯಾಗಿದ್ದ ಇಂದಿರಾಗಾಂಧಿಯವರು ಭಾರತೀಯ ಬಾಹ್ಯಕಾಶ ಯಾತ್ರಿಕನಾದ  ರಾಕೇಶ್ ಶರ್ಮಾ ಅವರು ಬಾಹ್ಯಕಾಶದಲ್ಲಿ ಇದ್ದಾಗ… ಮೇಲಿಂದ ನಮ್ಮ ಭಾರತ ಹೇಗೆ ಕಾಣುತ್ತದೆ ಎಂಬ ಪ್ರಶ್ನೆ ಕೇಳಿದರು. ಅದಕ್ಕೆ ಉತ್ತರವಾಗಿ ರಾಕೇಶ್ ಶರ್ಮಾ ಹೇಳಿದರು… ಸಾರೇ ಜಹಾಂ ಸೇ ಅಚ್ಚಾ ಹಿಂದೂಸ್ತಾನ್ ಹಮಾರಾ…

Advertisement
Advertisement

ಅಜಾದಿ ಕಾ ಅಮೃತ್ ಮಹೋತ್ಸವ ಆಚರಿಸುವ ಈ ಸಂದರ್ಭದಲ್ಲಿ ಜಾತಿ, ಧರ್ಮ, ರಾಜಕೀಯ ಭಾವ ಭೇದ ವಿಲ್ಲದೆ ಪ್ರತಿಯೊಬ್ಬ ನಾಗರೀಕನು  ಭಾರತ ಸಂಸ್ಕೃತಿ ಮತ್ತು ನಮ್ಮ ದೇಶದ ಸಂವಿಧಾನ ವನ್ನು ಎತ್ತಿ ಹಿಡಿಯುವ ಮೂಲಕ ದೇಶವನ್ನು ಅಭಿವೃದ್ಧಿಯ ಪಥದತ್ತ ಚಲಾಯಿಸಬೇಕು. ಒಂದೊಂದು ಗ್ರಾಮದಲ್ಲಿ ಭಾರತ ನಿರ್ಮಾಣವಾಗಬೇಕು. ಗ್ರಾಮ ಭಾರತ ಎಂಬ ಆಶಯದೊಂದಿಗೆ ಗ್ರಾಮ ಮಟ್ಟದ, ಸಾಮಾನ್ಯ ಜನರ ಮೂಲಭೂತ ಕೊರತೆಯನ್ನು ( ರಸ್ತೆ, ಸೇತುವೆ, ವಸತಿ, ವಿದ್ಯುತ್, ನೆಟ್ ವರ್ಕ್, ನಿರುದ್ಯೋಗ ಉದ್ಯೋಗ ವಿಲ್ಲದೆ ಯುವಕರು ಕಂಗಲಾಗಿದೆ ಇತ್ಯಾದಿ ಸಮಸ್ಯೆ ) ನೀಗಿಸುವಲ್ಲಿ ಜನಪ್ರತಿನಿದಿಗಳು, ಅಧಿಕಾರಿಗಳು ನಿಸ್ವಾರ್ಥ ಸೇವೆ ಮಾಡುವ ಮೂಲಕ ಆಯಾ ಗ್ರಾಮವನ್ನು ಗ್ರಾಮ ಭಾರತ ಮಾಡಬಹುದು.ಅಜಾದಿ ಕಾ ಅಮೃತ ಮಹೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ನಮ್ಮ ದೇಶದ ಹಳ್ಳಿ ಗಳನ್ನು, ಗ್ರಾಮಗಳನ್ನು ಅಭಿವೃದ್ಧಿಪಡಿಸುವ ಕೊಡುಗೆ ನಮ್ಮ ಪ್ರದಾನ ಮಂತ್ರಿ  ನರೇಂದ್ರ ಮೋದಿ ಅವರು ನೀಡುತ್ತೇವೆ ಎಂಬುವುದು ನಮ್ಮ ಭರವಸೆ .

ಭಾರತ ನನ್ನ ದೇಶ, ಎಲ್ಲಾ ಭಾರತೀಯರು ನನ್ನ ಸಹೋದರ, ಸಹೋದರಿಯರು….. ಸಾಮರಸ್ಯ ದಿಂದ ಮುಂದೆ ಸಾಗೋಣ. ನಮ್ಮ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿದರೆ ಮಾತ್ರ ಸ್ವಾತಂತ್ರ್ಯ. ಪ್ರಜಾಪ್ರಭುತ್ವ ಇಲ್ಲದ ದೇಶದಲ್ಲಿ ಸ್ವಾತಂತ್ರ್ಯ ಇಲ್ಲ.ಪ್ರತಿಯೊಬ್ಬ ನಾಗರೀಕನು ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸಲು ಬದ್ಧನಾಗಿರಬೇಕು.

ದೇಶದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನು ನಮಿಸುತ್ತಾ… ಜೈ ಭಾರತ… ಸಾರೇ ಜಹಾಂ ಸೇ ಅಚ್ಚಾ, ಹಿಂದೂಸ್ತಾನ್ ಹಮಾರಾ…

ಬರಹ :
ಫಾ. ಆದರ್ಶ್ ಜೋಸೆಫ್ ಧರ್ಮಗುರುಗಳು ಹಾಗೂ ಸಾಮಾಜಿಕ ಕಾರ್ಯಕರ್ತರು, ಸೈಂಟ್ ಮೇರಿಸ್ ಚರ್ಚ್, ಗುತ್ತಿಗಾರು
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…

4 hours ago

ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ

ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…

4 hours ago

ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ

ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…

6 hours ago

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ…

6 hours ago

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ…

6 hours ago

2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…

ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…

11 hours ago