ಚುನಾವಣ ನೀತಿ ಸಂಹಿತೆ ಉಲ್ಲಂಘನೆ: ಕಾಣಿಯೂರು ಗ್ರಾಮ ಪಂಚಾಯತ್ ಅಭ್ಯರ್ಥಿಯ ಮೇಲೆ ದೂರು ದಾಖಲು

December 26, 2020
10:21 AM

ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಭ್ಯರ್ಥಿ 50 ಕ್ಕೂ ಹೆಚ್ಚು ಜನರನ್ನು ಸೇರಿಸಿ ಪ್ರಚಾರ ಮಾಡಿ ಶಾಸಕರ ಸಂಸದರ ಅನುದಾನಗಳ ಪಟ್ಟಿ ಪ್ರಕಟಿಸಿ ನೀತಿ ಸಂಹಿತೆಯ ಉಲ್ಲಂಘಿಸಿದ ಕಾರಣ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪ್ರಕರಣ ದಾಖಲಾಗಿದೆ.

ಚಾರ್ವಾಕ ಗ್ರಾಮದಲ್ಲಿ ಒಂದೇ ದಿನ 13 ಕೊರೋನಾ ಪ್ರಕರಣ ದಾಖಲಾಗಿದ್ದರು, ಯಾವುದೇ ಮುಂಜಾಗೃತ ಕ್ರಮ ಕೈಗೊಳ್ಳದೆ 50 ಮಿಕ್ಕಿ ಜನರನ್ನು ಸೇರಿಸಿ ಪ್ರಚಾರ ಮಾಡಿದ್ದು ಹಾಗೂ ಶಾಸಕರು, ಸಂಸದರ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸದಸ್ಯರ ಅನುದಾನಗಳ ಪಟ್ಟಿ ತಯಾರಿಸಿ ಹಂಚಿದ್ದರಿಂದ ಬಿಜೆಪಿ ಬೆಳಂದೂರು ಶಕ್ತಿ ಕೇಂದ್ರ ಅಧ್ಯಕ್ಷ, ಚಾರ್ವಾಕ 1 ನೇ ವಾರ್ಡ್ ನ ಬಿಜೆಪಿಯ ಬೆಂಬಲಿತ ಅಭ್ಯರ್ಥಿ ಗಣೇಶ ಉದನಡ್ಕ ವಿರುದ್ಧ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣ ದಾಖಲಿಸಬೇಕೆಂದು ಹಾಗೂ ನೀತಿಸಂಹಿತೆ ಉಲ್ಲಂಘಿಸಿದರಿಂದ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಮಾಡಬೇಕೆಂದು ಪಕ್ಷೇತರ ಅಭ್ಯರ್ಥಿ ಕಾಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಇಡ್ಯಡ್ಕ ದೂರು ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ
March 15, 2026
11:39 AM
by: ದ ರೂರಲ್ ಮಿರರ್.ಕಾಂ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror