ಚುನಾವಣ ನೀತಿ ಸಂಹಿತೆ ಉಲ್ಲಂಘನೆ: ಕಾಣಿಯೂರು ಗ್ರಾಮ ಪಂಚಾಯತ್ ಅಭ್ಯರ್ಥಿಯ ಮೇಲೆ ದೂರು ದಾಖಲು

December 26, 2020
10:21 AM

ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಭ್ಯರ್ಥಿ 50 ಕ್ಕೂ ಹೆಚ್ಚು ಜನರನ್ನು ಸೇರಿಸಿ ಪ್ರಚಾರ ಮಾಡಿ ಶಾಸಕರ ಸಂಸದರ ಅನುದಾನಗಳ ಪಟ್ಟಿ ಪ್ರಕಟಿಸಿ ನೀತಿ ಸಂಹಿತೆಯ ಉಲ್ಲಂಘಿಸಿದ ಕಾರಣ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪ್ರಕರಣ ದಾಖಲಾಗಿದೆ.

ಚಾರ್ವಾಕ ಗ್ರಾಮದಲ್ಲಿ ಒಂದೇ ದಿನ 13 ಕೊರೋನಾ ಪ್ರಕರಣ ದಾಖಲಾಗಿದ್ದರು, ಯಾವುದೇ ಮುಂಜಾಗೃತ ಕ್ರಮ ಕೈಗೊಳ್ಳದೆ 50 ಮಿಕ್ಕಿ ಜನರನ್ನು ಸೇರಿಸಿ ಪ್ರಚಾರ ಮಾಡಿದ್ದು ಹಾಗೂ ಶಾಸಕರು, ಸಂಸದರ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸದಸ್ಯರ ಅನುದಾನಗಳ ಪಟ್ಟಿ ತಯಾರಿಸಿ ಹಂಚಿದ್ದರಿಂದ ಬಿಜೆಪಿ ಬೆಳಂದೂರು ಶಕ್ತಿ ಕೇಂದ್ರ ಅಧ್ಯಕ್ಷ, ಚಾರ್ವಾಕ 1 ನೇ ವಾರ್ಡ್ ನ ಬಿಜೆಪಿಯ ಬೆಂಬಲಿತ ಅಭ್ಯರ್ಥಿ ಗಣೇಶ ಉದನಡ್ಕ ವಿರುದ್ಧ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣ ದಾಖಲಿಸಬೇಕೆಂದು ಹಾಗೂ ನೀತಿಸಂಹಿತೆ ಉಲ್ಲಂಘಿಸಿದರಿಂದ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಮಾಡಬೇಕೆಂದು ಪಕ್ಷೇತರ ಅಭ್ಯರ್ಥಿ ಕಾಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಇಡ್ಯಡ್ಕ ದೂರು ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!
May 27, 2026
8:51 PM
by: ದ ರೂರಲ್ ಮಿರರ್.ಕಾಂ
ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ
May 27, 2026
2:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ
May 27, 2026
12:11 PM
by: ದ ರೂರಲ್ ಮಿರರ್.ಕಾಂ
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror