ಕಡಬ ತಾಲೂಕಿನ ಕಾಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಅಭ್ಯರ್ಥಿ 50 ಕ್ಕೂ ಹೆಚ್ಚು ಜನರನ್ನು ಸೇರಿಸಿ ಪ್ರಚಾರ ಮಾಡಿ ಶಾಸಕರ ಸಂಸದರ ಅನುದಾನಗಳ ಪಟ್ಟಿ ಪ್ರಕಟಿಸಿ ನೀತಿ ಸಂಹಿತೆಯ ಉಲ್ಲಂಘಿಸಿದ ಕಾರಣ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪ್ರಕರಣ ದಾಖಲಾಗಿದೆ.
ಚಾರ್ವಾಕ ಗ್ರಾಮದಲ್ಲಿ ಒಂದೇ ದಿನ 13 ಕೊರೋನಾ ಪ್ರಕರಣ ದಾಖಲಾಗಿದ್ದರು, ಯಾವುದೇ ಮುಂಜಾಗೃತ ಕ್ರಮ ಕೈಗೊಳ್ಳದೆ 50 ಮಿಕ್ಕಿ ಜನರನ್ನು ಸೇರಿಸಿ ಪ್ರಚಾರ ಮಾಡಿದ್ದು ಹಾಗೂ ಶಾಸಕರು, ಸಂಸದರ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸದಸ್ಯರ ಅನುದಾನಗಳ ಪಟ್ಟಿ ತಯಾರಿಸಿ ಹಂಚಿದ್ದರಿಂದ ಬಿಜೆಪಿ ಬೆಳಂದೂರು ಶಕ್ತಿ ಕೇಂದ್ರ ಅಧ್ಯಕ್ಷ, ಚಾರ್ವಾಕ 1 ನೇ ವಾರ್ಡ್ ನ ಬಿಜೆಪಿಯ ಬೆಂಬಲಿತ ಅಭ್ಯರ್ಥಿ ಗಣೇಶ ಉದನಡ್ಕ ವಿರುದ್ಧ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣ ದಾಖಲಿಸಬೇಕೆಂದು ಹಾಗೂ ನೀತಿಸಂಹಿತೆ ಉಲ್ಲಂಘಿಸಿದರಿಂದ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಮಾಡಬೇಕೆಂದು ಪಕ್ಷೇತರ ಅಭ್ಯರ್ಥಿ ಕಾಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಇಡ್ಯಡ್ಕ ದೂರು ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…