ದೀಪಾವಳಿ | ದೀಪಗಳಿಂದ ಕಂಗೊಳಿಸಿದ ಜನರ ಸೇತುವೆ | ಸೇತುವೆಯ ಮೂಲಕ ಶಾಶ್ವತ ಬೆಳಕಿನ ಆಶಯ |

October 24, 2022
10:55 PM

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಬಳಿ ಜನರು ಹಾಗೂ ವಿವಿಧ ಗಣ್ಯರ ಸಹಕಾರದೊಂದಿಗೆ ಜನರಿಂದಲೇ ರಚನೆಯಾದ ಗ್ರಾಮಸೇತು ಬಳಿ ದೀಪಾವಳಿ ಆಚರಣೆ ನಡೆಯಿತು. ಸತತವಾಗಿ ಮೂರನೇ ವರ್ಷದ ದೀಪಾವಳಿಯು ಸರಳವಾಗಿ ಆಚರಿಸಲಾಯಿತು. ದೀಪಗಳಿಂದ ಗ್ರಾಮಸೇತು ಕಂಗೊಳಿಸಿತು.

Advertisement
Advertisement

Advertisement

ಗ್ರಾಮಸೇತುವಿನ ಅಕ್ಕಪಕ್ಕದಲ್ಲಿ ಹಣತೆ ಹಚ್ಚಿದ ಗ್ರಾಮಭಾರತ ತಂಡದ ಸದಸ್ಯರು ಹಾಗೂ ನಾಗರಿಕರು ಸಮಸ್ತರಿಗೂ ದೀಪಾವಳಿಯ ಶುಭಾಶಯ ಕೋರಿ ಸಿಹಿ ಹಂಚಿದರು. ಕಳೆದ ಮೂರು ವರ್ಷಗಳಿಂದ ಮೊಗ್ರ- ಏರಣಗುಡ್ಡೆ ಸೇತುವೆ ಬೇಡಿಕೆ ಈಡೇರಿಕೆಗೆ ಒತ್ತಾಯ ನಡೆಯುತ್ತಿದೆ. ಕಳೆದ ವರ್ಷ ಜನರೇ ಕಾಲು ಸಂಕ ರಚಿಸಿದ್ದರು. ಹೀಗಾಗಿ ಕಳೆದ ಎರಡು ವರ್ಷಗಳಿಂದ ಮೊಗ್ರ ಶಾಲೆ ಹಾಗೂ ಆಸುಪಾಸಿನ ಜನರಿಗೆ ತಾತ್ಕಾಲಿಕ ಸಂಪರ್ಕ ಸಾಧ್ಯವಾಗಿದೆ. ಮುಂದೆ ಶಾಶ್ವತ ಸೇತುವೆ ಬೇಡಿಕೆ ಇದೆ.  ದೀಪಾವಳಿಯ ಸಂದರ್ಭ ಸೇತುವೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಣತೆ ಬೆಳಗಿ ಗ್ರಾಮದ ಜನರಿಗೆ ಸೇತುವೆ ಬೆಳಕಾಗಲಿ ಎಂದು ಒತ್ತಾಯಿಸುತ್ತಿದ್ದಾರೆ.

Advertisement

ದೀಪ ಬೆಳಗುವ ಕಾರ್ಯಕ್ರಮದ ಸಂದರ್ಭ ಗ್ರಾಮಭಾರತ ತಂಡದ ಅಧ್ಯಕ್ಷರಾಗಿ ಗಂಗಾಧರ ಭಟ್‌ ಪುಚ್ಚಪ್ಪಾಡಿ, ಸಂಚಾಲಕರಾದ ಸುಧಾಕರ ಮಲ್ಕಜೆ, ಕಾರ್ಯದರ್ಶಿ ಮುಂಜುನಾಥ ಮುತ್ಲಾಜೆ, ಗ್ರಾಪಂ ಸದಸ್ಯ‌ ವಸಂತ ಮೊಗ್ರ ಸೇರಿದಂತೆ ಪ್ರಮುಖರು ಭಾಗವಹಿಸಿದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |
April 25, 2024
2:00 PM
by: ದ ರೂರಲ್ ಮಿರರ್.ಕಾಂ
Karnataka Weather | 25-04-2024 | ಮಳೆ ಕಡಿಮೆಯಾಯ್ತು… | ಮೋಡ ಶುರುವಾಯ್ತು |
April 25, 2024
1:00 PM
by: ಸಾಯಿಶೇಖರ್ ಕರಿಕಳ
ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror