Advertisement
ಸುದ್ದಿಗಳು

ದೀಪಾವಳಿ | ದೀಪಗಳಿಂದ ಕಂಗೊಳಿಸಿದ ಜನರ ಸೇತುವೆ | ಸೇತುವೆಯ ಮೂಲಕ ಶಾಶ್ವತ ಬೆಳಕಿನ ಆಶಯ |

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಬಳಿ ಜನರು ಹಾಗೂ ವಿವಿಧ ಗಣ್ಯರ ಸಹಕಾರದೊಂದಿಗೆ ಜನರಿಂದಲೇ ರಚನೆಯಾದ ಗ್ರಾಮಸೇತು ಬಳಿ ದೀಪಾವಳಿ ಆಚರಣೆ ನಡೆಯಿತು. ಸತತವಾಗಿ ಮೂರನೇ ವರ್ಷದ ದೀಪಾವಳಿಯು ಸರಳವಾಗಿ ಆಚರಿಸಲಾಯಿತು. ದೀಪಗಳಿಂದ ಗ್ರಾಮಸೇತು ಕಂಗೊಳಿಸಿತು.

ಗ್ರಾಮಸೇತುವಿನ ಅಕ್ಕಪಕ್ಕದಲ್ಲಿ ಹಣತೆ ಹಚ್ಚಿದ ಗ್ರಾಮಭಾರತ ತಂಡದ ಸದಸ್ಯರು ಹಾಗೂ ನಾಗರಿಕರು ಸಮಸ್ತರಿಗೂ ದೀಪಾವಳಿಯ ಶುಭಾಶಯ ಕೋರಿ ಸಿಹಿ ಹಂಚಿದರು. ಕಳೆದ ಮೂರು ವರ್ಷಗಳಿಂದ ಮೊಗ್ರ- ಏರಣಗುಡ್ಡೆ ಸೇತುವೆ ಬೇಡಿಕೆ ಈಡೇರಿಕೆಗೆ ಒತ್ತಾಯ ನಡೆಯುತ್ತಿದೆ. ಕಳೆದ ವರ್ಷ ಜನರೇ ಕಾಲು ಸಂಕ ರಚಿಸಿದ್ದರು. ಹೀಗಾಗಿ ಕಳೆದ ಎರಡು ವರ್ಷಗಳಿಂದ ಮೊಗ್ರ ಶಾಲೆ ಹಾಗೂ ಆಸುಪಾಸಿನ ಜನರಿಗೆ ತಾತ್ಕಾಲಿಕ ಸಂಪರ್ಕ ಸಾಧ್ಯವಾಗಿದೆ. ಮುಂದೆ ಶಾಶ್ವತ ಸೇತುವೆ ಬೇಡಿಕೆ ಇದೆ.  ದೀಪಾವಳಿಯ ಸಂದರ್ಭ ಸೇತುವೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಣತೆ ಬೆಳಗಿ ಗ್ರಾಮದ ಜನರಿಗೆ ಸೇತುವೆ ಬೆಳಕಾಗಲಿ ಎಂದು ಒತ್ತಾಯಿಸುತ್ತಿದ್ದಾರೆ.

ದೀಪ ಬೆಳಗುವ ಕಾರ್ಯಕ್ರಮದ ಸಂದರ್ಭ ಗ್ರಾಮಭಾರತ ತಂಡದ ಅಧ್ಯಕ್ಷರಾಗಿ ಗಂಗಾಧರ ಭಟ್‌ ಪುಚ್ಚಪ್ಪಾಡಿ, ಸಂಚಾಲಕರಾದ ಸುಧಾಕರ ಮಲ್ಕಜೆ, ಕಾರ್ಯದರ್ಶಿ ಮುಂಜುನಾಥ ಮುತ್ಲಾಜೆ, ಗ್ರಾಪಂ ಸದಸ್ಯ‌ ವಸಂತ ಮೊಗ್ರ ಸೇರಿದಂತೆ ಪ್ರಮುಖರು ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

9 minutes ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

8 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

8 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

8 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

16 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

17 hours ago