ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಬಳಿ ಜನರು ಹಾಗೂ ವಿವಿಧ ಗಣ್ಯರ ಸಹಕಾರದೊಂದಿಗೆ ಜನರಿಂದಲೇ ರಚನೆಯಾದ ಗ್ರಾಮಸೇತು ಬಳಿ ದೀಪಾವಳಿ ಆಚರಣೆ ನಡೆಯಿತು. ಸತತವಾಗಿ ಮೂರನೇ ವರ್ಷದ ದೀಪಾವಳಿಯು ಸರಳವಾಗಿ ಆಚರಿಸಲಾಯಿತು. ದೀಪಗಳಿಂದ ಗ್ರಾಮಸೇತು ಕಂಗೊಳಿಸಿತು.
ಗ್ರಾಮಸೇತುವಿನ ಅಕ್ಕಪಕ್ಕದಲ್ಲಿ ಹಣತೆ ಹಚ್ಚಿದ ಗ್ರಾಮಭಾರತ ತಂಡದ ಸದಸ್ಯರು ಹಾಗೂ ನಾಗರಿಕರು ಸಮಸ್ತರಿಗೂ ದೀಪಾವಳಿಯ ಶುಭಾಶಯ ಕೋರಿ ಸಿಹಿ ಹಂಚಿದರು. ಕಳೆದ ಮೂರು ವರ್ಷಗಳಿಂದ ಮೊಗ್ರ- ಏರಣಗುಡ್ಡೆ ಸೇತುವೆ ಬೇಡಿಕೆ ಈಡೇರಿಕೆಗೆ ಒತ್ತಾಯ ನಡೆಯುತ್ತಿದೆ. ಕಳೆದ ವರ್ಷ ಜನರೇ ಕಾಲು ಸಂಕ ರಚಿಸಿದ್ದರು. ಹೀಗಾಗಿ ಕಳೆದ ಎರಡು ವರ್ಷಗಳಿಂದ ಮೊಗ್ರ ಶಾಲೆ ಹಾಗೂ ಆಸುಪಾಸಿನ ಜನರಿಗೆ ತಾತ್ಕಾಲಿಕ ಸಂಪರ್ಕ ಸಾಧ್ಯವಾಗಿದೆ. ಮುಂದೆ ಶಾಶ್ವತ ಸೇತುವೆ ಬೇಡಿಕೆ ಇದೆ. ದೀಪಾವಳಿಯ ಸಂದರ್ಭ ಸೇತುವೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಣತೆ ಬೆಳಗಿ ಗ್ರಾಮದ ಜನರಿಗೆ ಸೇತುವೆ ಬೆಳಕಾಗಲಿ ಎಂದು ಒತ್ತಾಯಿಸುತ್ತಿದ್ದಾರೆ.
ದೀಪ ಬೆಳಗುವ ಕಾರ್ಯಕ್ರಮದ ಸಂದರ್ಭ ಗ್ರಾಮಭಾರತ ತಂಡದ ಅಧ್ಯಕ್ಷರಾಗಿ ಗಂಗಾಧರ ಭಟ್ ಪುಚ್ಚಪ್ಪಾಡಿ, ಸಂಚಾಲಕರಾದ ಸುಧಾಕರ ಮಲ್ಕಜೆ, ಕಾರ್ಯದರ್ಶಿ ಮುಂಜುನಾಥ ಮುತ್ಲಾಜೆ, ಗ್ರಾಪಂ ಸದಸ್ಯ ವಸಂತ ಮೊಗ್ರ ಸೇರಿದಂತೆ ಪ್ರಮುಖರು ಭಾಗವಹಿಸಿದರು.
ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…
ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…
ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುವ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…