Advertisement
ಸುದ್ದಿಗಳು

ದೀಪಾವಳಿ | ದೀಪಗಳಿಂದ ಕಂಗೊಳಿಸಿದ ಜನರ ಸೇತುವೆ | ಸೇತುವೆಯ ಮೂಲಕ ಶಾಶ್ವತ ಬೆಳಕಿನ ಆಶಯ |

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಬಳಿ ಜನರು ಹಾಗೂ ವಿವಿಧ ಗಣ್ಯರ ಸಹಕಾರದೊಂದಿಗೆ ಜನರಿಂದಲೇ ರಚನೆಯಾದ ಗ್ರಾಮಸೇತು ಬಳಿ ದೀಪಾವಳಿ ಆಚರಣೆ ನಡೆಯಿತು. ಸತತವಾಗಿ ಮೂರನೇ ವರ್ಷದ ದೀಪಾವಳಿಯು ಸರಳವಾಗಿ ಆಚರಿಸಲಾಯಿತು. ದೀಪಗಳಿಂದ ಗ್ರಾಮಸೇತು ಕಂಗೊಳಿಸಿತು.

ಗ್ರಾಮಸೇತುವಿನ ಅಕ್ಕಪಕ್ಕದಲ್ಲಿ ಹಣತೆ ಹಚ್ಚಿದ ಗ್ರಾಮಭಾರತ ತಂಡದ ಸದಸ್ಯರು ಹಾಗೂ ನಾಗರಿಕರು ಸಮಸ್ತರಿಗೂ ದೀಪಾವಳಿಯ ಶುಭಾಶಯ ಕೋರಿ ಸಿಹಿ ಹಂಚಿದರು. ಕಳೆದ ಮೂರು ವರ್ಷಗಳಿಂದ ಮೊಗ್ರ- ಏರಣಗುಡ್ಡೆ ಸೇತುವೆ ಬೇಡಿಕೆ ಈಡೇರಿಕೆಗೆ ಒತ್ತಾಯ ನಡೆಯುತ್ತಿದೆ. ಕಳೆದ ವರ್ಷ ಜನರೇ ಕಾಲು ಸಂಕ ರಚಿಸಿದ್ದರು. ಹೀಗಾಗಿ ಕಳೆದ ಎರಡು ವರ್ಷಗಳಿಂದ ಮೊಗ್ರ ಶಾಲೆ ಹಾಗೂ ಆಸುಪಾಸಿನ ಜನರಿಗೆ ತಾತ್ಕಾಲಿಕ ಸಂಪರ್ಕ ಸಾಧ್ಯವಾಗಿದೆ. ಮುಂದೆ ಶಾಶ್ವತ ಸೇತುವೆ ಬೇಡಿಕೆ ಇದೆ.  ದೀಪಾವಳಿಯ ಸಂದರ್ಭ ಸೇತುವೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಣತೆ ಬೆಳಗಿ ಗ್ರಾಮದ ಜನರಿಗೆ ಸೇತುವೆ ಬೆಳಕಾಗಲಿ ಎಂದು ಒತ್ತಾಯಿಸುತ್ತಿದ್ದಾರೆ.

ದೀಪ ಬೆಳಗುವ ಕಾರ್ಯಕ್ರಮದ ಸಂದರ್ಭ ಗ್ರಾಮಭಾರತ ತಂಡದ ಅಧ್ಯಕ್ಷರಾಗಿ ಗಂಗಾಧರ ಭಟ್‌ ಪುಚ್ಚಪ್ಪಾಡಿ, ಸಂಚಾಲಕರಾದ ಸುಧಾಕರ ಮಲ್ಕಜೆ, ಕಾರ್ಯದರ್ಶಿ ಮುಂಜುನಾಥ ಮುತ್ಲಾಜೆ, ಗ್ರಾಪಂ ಸದಸ್ಯ‌ ವಸಂತ ಮೊಗ್ರ ಸೇರಿದಂತೆ ಪ್ರಮುಖರು ಭಾಗವಹಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago