ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಬಳಿ ಜನರು ಹಾಗೂ ವಿವಿಧ ಗಣ್ಯರ ಸಹಕಾರದೊಂದಿಗೆ ಜನರಿಂದಲೇ ರಚನೆಯಾದ ಗ್ರಾಮಸೇತು ಬಳಿ ದೀಪಾವಳಿ ಆಚರಣೆ ನಡೆಯಿತು. ಸತತವಾಗಿ ಮೂರನೇ ವರ್ಷದ ದೀಪಾವಳಿಯು ಸರಳವಾಗಿ ಆಚರಿಸಲಾಯಿತು. ದೀಪಗಳಿಂದ ಗ್ರಾಮಸೇತು ಕಂಗೊಳಿಸಿತು.
ಗ್ರಾಮಸೇತುವಿನ ಅಕ್ಕಪಕ್ಕದಲ್ಲಿ ಹಣತೆ ಹಚ್ಚಿದ ಗ್ರಾಮಭಾರತ ತಂಡದ ಸದಸ್ಯರು ಹಾಗೂ ನಾಗರಿಕರು ಸಮಸ್ತರಿಗೂ ದೀಪಾವಳಿಯ ಶುಭಾಶಯ ಕೋರಿ ಸಿಹಿ ಹಂಚಿದರು. ಕಳೆದ ಮೂರು ವರ್ಷಗಳಿಂದ ಮೊಗ್ರ- ಏರಣಗುಡ್ಡೆ ಸೇತುವೆ ಬೇಡಿಕೆ ಈಡೇರಿಕೆಗೆ ಒತ್ತಾಯ ನಡೆಯುತ್ತಿದೆ. ಕಳೆದ ವರ್ಷ ಜನರೇ ಕಾಲು ಸಂಕ ರಚಿಸಿದ್ದರು. ಹೀಗಾಗಿ ಕಳೆದ ಎರಡು ವರ್ಷಗಳಿಂದ ಮೊಗ್ರ ಶಾಲೆ ಹಾಗೂ ಆಸುಪಾಸಿನ ಜನರಿಗೆ ತಾತ್ಕಾಲಿಕ ಸಂಪರ್ಕ ಸಾಧ್ಯವಾಗಿದೆ. ಮುಂದೆ ಶಾಶ್ವತ ಸೇತುವೆ ಬೇಡಿಕೆ ಇದೆ. ದೀಪಾವಳಿಯ ಸಂದರ್ಭ ಸೇತುವೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಣತೆ ಬೆಳಗಿ ಗ್ರಾಮದ ಜನರಿಗೆ ಸೇತುವೆ ಬೆಳಕಾಗಲಿ ಎಂದು ಒತ್ತಾಯಿಸುತ್ತಿದ್ದಾರೆ.
ದೀಪ ಬೆಳಗುವ ಕಾರ್ಯಕ್ರಮದ ಸಂದರ್ಭ ಗ್ರಾಮಭಾರತ ತಂಡದ ಅಧ್ಯಕ್ಷರಾಗಿ ಗಂಗಾಧರ ಭಟ್ ಪುಚ್ಚಪ್ಪಾಡಿ, ಸಂಚಾಲಕರಾದ ಸುಧಾಕರ ಮಲ್ಕಜೆ, ಕಾರ್ಯದರ್ಶಿ ಮುಂಜುನಾಥ ಮುತ್ಲಾಜೆ, ಗ್ರಾಪಂ ಸದಸ್ಯ ವಸಂತ ಮೊಗ್ರ ಸೇರಿದಂತೆ ಪ್ರಮುಖರು ಭಾಗವಹಿಸಿದರು.
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…
ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…