ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಬಳಿ ಜನರು ಹಾಗೂ ವಿವಿಧ ಗಣ್ಯರ ಸಹಕಾರದೊಂದಿಗೆ ಜನರಿಂದಲೇ ರಚನೆಯಾದ ಗ್ರಾಮಸೇತು ಬಳಿ ದೀಪಾವಳಿ ಆಚರಣೆ ನಡೆಯಿತು. ಸತತವಾಗಿ ಮೂರನೇ ವರ್ಷದ ದೀಪಾವಳಿಯು ಸರಳವಾಗಿ ಆಚರಿಸಲಾಯಿತು. ದೀಪಗಳಿಂದ ಗ್ರಾಮಸೇತು ಕಂಗೊಳಿಸಿತು.
ಗ್ರಾಮಸೇತುವಿನ ಅಕ್ಕಪಕ್ಕದಲ್ಲಿ ಹಣತೆ ಹಚ್ಚಿದ ಗ್ರಾಮಭಾರತ ತಂಡದ ಸದಸ್ಯರು ಹಾಗೂ ನಾಗರಿಕರು ಸಮಸ್ತರಿಗೂ ದೀಪಾವಳಿಯ ಶುಭಾಶಯ ಕೋರಿ ಸಿಹಿ ಹಂಚಿದರು. ಕಳೆದ ಮೂರು ವರ್ಷಗಳಿಂದ ಮೊಗ್ರ- ಏರಣಗುಡ್ಡೆ ಸೇತುವೆ ಬೇಡಿಕೆ ಈಡೇರಿಕೆಗೆ ಒತ್ತಾಯ ನಡೆಯುತ್ತಿದೆ. ಕಳೆದ ವರ್ಷ ಜನರೇ ಕಾಲು ಸಂಕ ರಚಿಸಿದ್ದರು. ಹೀಗಾಗಿ ಕಳೆದ ಎರಡು ವರ್ಷಗಳಿಂದ ಮೊಗ್ರ ಶಾಲೆ ಹಾಗೂ ಆಸುಪಾಸಿನ ಜನರಿಗೆ ತಾತ್ಕಾಲಿಕ ಸಂಪರ್ಕ ಸಾಧ್ಯವಾಗಿದೆ. ಮುಂದೆ ಶಾಶ್ವತ ಸೇತುವೆ ಬೇಡಿಕೆ ಇದೆ. ದೀಪಾವಳಿಯ ಸಂದರ್ಭ ಸೇತುವೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಣತೆ ಬೆಳಗಿ ಗ್ರಾಮದ ಜನರಿಗೆ ಸೇತುವೆ ಬೆಳಕಾಗಲಿ ಎಂದು ಒತ್ತಾಯಿಸುತ್ತಿದ್ದಾರೆ.
ದೀಪ ಬೆಳಗುವ ಕಾರ್ಯಕ್ರಮದ ಸಂದರ್ಭ ಗ್ರಾಮಭಾರತ ತಂಡದ ಅಧ್ಯಕ್ಷರಾಗಿ ಗಂಗಾಧರ ಭಟ್ ಪುಚ್ಚಪ್ಪಾಡಿ, ಸಂಚಾಲಕರಾದ ಸುಧಾಕರ ಮಲ್ಕಜೆ, ಕಾರ್ಯದರ್ಶಿ ಮುಂಜುನಾಥ ಮುತ್ಲಾಜೆ, ಗ್ರಾಪಂ ಸದಸ್ಯ ವಸಂತ ಮೊಗ್ರ ಸೇರಿದಂತೆ ಪ್ರಮುಖರು ಭಾಗವಹಿಸಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…