ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಬಳಿ ಜನರು ಹಾಗೂ ವಿವಿಧ ಗಣ್ಯರ ಸಹಕಾರದೊಂದಿಗೆ ಜನರಿಂದಲೇ ರಚನೆಯಾದ ಗ್ರಾಮಸೇತು ಬಳಿ ದೀಪಾವಳಿ ಆಚರಣೆ ನಡೆಯಿತು. ಸತತವಾಗಿ ಮೂರನೇ ವರ್ಷದ ದೀಪಾವಳಿಯು ಸರಳವಾಗಿ ಆಚರಿಸಲಾಯಿತು. ದೀಪಗಳಿಂದ ಗ್ರಾಮಸೇತು ಕಂಗೊಳಿಸಿತು.
ಗ್ರಾಮಸೇತುವಿನ ಅಕ್ಕಪಕ್ಕದಲ್ಲಿ ಹಣತೆ ಹಚ್ಚಿದ ಗ್ರಾಮಭಾರತ ತಂಡದ ಸದಸ್ಯರು ಹಾಗೂ ನಾಗರಿಕರು ಸಮಸ್ತರಿಗೂ ದೀಪಾವಳಿಯ ಶುಭಾಶಯ ಕೋರಿ ಸಿಹಿ ಹಂಚಿದರು. ಕಳೆದ ಮೂರು ವರ್ಷಗಳಿಂದ ಮೊಗ್ರ- ಏರಣಗುಡ್ಡೆ ಸೇತುವೆ ಬೇಡಿಕೆ ಈಡೇರಿಕೆಗೆ ಒತ್ತಾಯ ನಡೆಯುತ್ತಿದೆ. ಕಳೆದ ವರ್ಷ ಜನರೇ ಕಾಲು ಸಂಕ ರಚಿಸಿದ್ದರು. ಹೀಗಾಗಿ ಕಳೆದ ಎರಡು ವರ್ಷಗಳಿಂದ ಮೊಗ್ರ ಶಾಲೆ ಹಾಗೂ ಆಸುಪಾಸಿನ ಜನರಿಗೆ ತಾತ್ಕಾಲಿಕ ಸಂಪರ್ಕ ಸಾಧ್ಯವಾಗಿದೆ. ಮುಂದೆ ಶಾಶ್ವತ ಸೇತುವೆ ಬೇಡಿಕೆ ಇದೆ. ದೀಪಾವಳಿಯ ಸಂದರ್ಭ ಸೇತುವೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಣತೆ ಬೆಳಗಿ ಗ್ರಾಮದ ಜನರಿಗೆ ಸೇತುವೆ ಬೆಳಕಾಗಲಿ ಎಂದು ಒತ್ತಾಯಿಸುತ್ತಿದ್ದಾರೆ.
ದೀಪ ಬೆಳಗುವ ಕಾರ್ಯಕ್ರಮದ ಸಂದರ್ಭ ಗ್ರಾಮಭಾರತ ತಂಡದ ಅಧ್ಯಕ್ಷರಾಗಿ ಗಂಗಾಧರ ಭಟ್ ಪುಚ್ಚಪ್ಪಾಡಿ, ಸಂಚಾಲಕರಾದ ಸುಧಾಕರ ಮಲ್ಕಜೆ, ಕಾರ್ಯದರ್ಶಿ ಮುಂಜುನಾಥ ಮುತ್ಲಾಜೆ, ಗ್ರಾಪಂ ಸದಸ್ಯ ವಸಂತ ಮೊಗ್ರ ಸೇರಿದಂತೆ ಪ್ರಮುಖರು ಭಾಗವಹಿಸಿದರು.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…