Advertisement
MIRROR FOCUS

Positive News | ಮೊಗ್ರದಲ್ಲಿ ನಿರ್ಮಾಣವಾಯಿತು “ಗ್ರಾಮ ಸೇತು ” | ಜನರಿಂದ ಜನರಿಗಾಗಿ ಜನರೇ ನಿರ್ಮಿಸಿದ ಕಾಲುಸಂಕ |

Share
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಎಂಬ ಪುಟ್ಟ ಹಳ್ಳಿ. ಸುಮಾರು  1300-1500 ಜನಸಂಖ್ಯೆ ಇರುವ ಪ್ರದೇಶ. ಈ ಊರಿನ ವ್ಯಾಪ್ತಿಗೆ ಕಮಿಲ, ಏರಣಗುಡ್ಡೆ, ಮಲ್ಕಜೆ, ಬಳ್ಳಕ್ಕ ಸೇರಿದಂತೆ ಒಂದೆರಡು ಪುಟ್ಟ ಪುಟ್ಟ ಊರು ಬರುತ್ತದೆ. ಊರಿನ ಕೇಂದ್ರ ಮೊಗ್ರ ಎಂಬ ಪ್ರದೇಶ. ಊರಿನ ಮತದಾನ ಕೇಂದ್ರವೂ ಮೊಗ್ರ ಶಾಲೆ. ಆದರೆ ಕಳೆದ ಅನೇಕ ವರ್ಷಗಳಿಂದ ಇಲ್ಲಿಗೆ ಸಂಪರ್ಕದ ವ್ಯವಸ್ಥೆ ಇರಲಿಲ್ಲ. ಇದೀಗ ಜನರಿಂದ ಜನರಿಗಾಗಿ ಜನರೇ “ಗ್ರಾಮ ಸೇತು” ಎಂಬ ಹೆಸರಿನಲ್ಲಿ  ಕಾಲು ಸಂಕ ರಚನೆ ಮಾಡಿದ್ದಾರೆ.
ನಿರ್ಮಾಣಗೊಂಡ ಕಾಲು ಸಂಕ
ಗುತ್ತಿಗಾರು ಗ್ರಾಮದ ಮೊಗ್ರ ಪ್ರದೇಶದಲ್ಲಿ ಮೊಗ್ರ ಸರಕಾರಿ ಶಾಲೆ- ಆರೋಗ್ಯ ಉಪಕೇಂದ್ರ-ಅಂಗನವಾಡಿ- ಮೊಗ್ರ‌‌  ಕನ್ನಡ ದೇವತೆ ಯಾನೆ ಪುರುಷ  ದೈವಸ್ಥಾನ, ಭಜನಾ ಮಂದಿರ ಇದೆ. ಆದರೆ ಈ ಕೇಂದ್ರವನ್ನು  ಸಂಪರ್ಕ ಮಾಡಲು, ಬಹುಪಾಲು ಜನರಿಗೆ ಕಷ್ಟವಾಗುತ್ತದೆ. ಕಾರಣ ಇಲ್ಲಿ ಹರಿಯುವ ಹೊಳೆ. ಇದುವರೆಗೂ ಇಲ್ಲಿಗೆ ಸೇತುವೆ ಆಗಿಲ್ಲ. ಈ ಕಾರಣದಿಂದ ಶಾಲೆಗೆ ಬರುವ ಮಕ್ಕಳಿಗೆ ಹೊಳೆ ದಾಟಲು ಕಷ್ಟವಾಗುತ್ತದೆ. ಮಹಿಳೆಯರಿಗೂ ಹೊಳೆ ದಾಟಲು ಆಗುವುದಿಲ್ಲ. ಇನ್ನು ಮಳೆಗಾಲ ಆರೋಗ್ಯ ಸಂಬಂಧಿ ವಿಷಯಗಳಿಗೂ ಕಷ್ಟವಾಗುತ್ತದೆ. ಹೀಗಾಗಿ ಸೇತುವೆ ರಚನೆಯಾಗಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದ ಇಲ್ಲಿನ ಜನರಿಂದ ಇದೆ. 2006  ರಿಂದಲೂ ವಿವಿಧ ಮಾಧ್ಯಮಗಳ ಮೂಲಕ, ಹಾಗೂ ನೇರವಾಗಿಯೂ ಜನಪ್ರತಿನಿಧಿಗಳಿಗೆ ಇಲ್ಲಿನ  ಜನರು ಮನವಿ ಮಾಡುತ್ತಲೇ ಬಂದಿದ್ದರು. ಆದರೆ ಇದುವರೆಗೂ ಸೇತುವೆ ರಚನೆ ಆಗಿಲ್ಲ  ಜನಪ್ರತಿನಿಧಿಗಳು ಚುನಾವಣೆಯ ಹೊತ್ತಿನಲ್ಲಿ ಭರವಸೆಯನ್ನು ಮಾತ್ರವೇ ನೀಡುತ್ತಾರೆ. ಆದರೆ ಸೇತುವೆ ಕನಸಾಗಿಯೇ ಉಳಿದಿದೆ. ಇದಕ್ಕಾಗಿ ವಿವಿಧ ಮಾಧ್ಯಮಗಳ ಮೂಲಕ ಸರಕಾರವನ್ನೂ ಗಮನ ಸೆಳೆಯಲಾಗಿದೆ. ಹಾಗಿದ್ದರೂ ಸೇತುವೆ ಆಗಲಿಲ್ಲ.
2006 ರಿಂದಲೂ ಶಾಲಾ ವಿದ್ಯಾರ್ಥಿಗಳು ಹೀಗೆ ದಾಟುತ್ತಿದ್ದರು.
ಇದುವರೆಗೂ ಈ ಹೊಳೆ ದಾಟಲು ಗ್ರಾಮ ಪಂಚಾಯತ್‌ ಅಡಿಕೆ ಮರದ ಪಾಲವನ್ನು ಹಾಕುತ್ತಿತ್ತು. ಇದರ ಮೇಲೆ ಶಾಲಾ ಮಕ್ಕಳು ದಾಟಬೇಕಿತ್ತು, ಮಹಿಳೆಯರೂ ದಾಟಬೇಕು. ಊರವರ ಸುರಕ್ಷತೆ ಹಾಗೂ ಮಳೆಗಾಲ ದ್ವಿಚಕ್ರ ಸವಾರರಿಗೆ ಅನುಕೂಲವಾಗುವಂತೆ  ಈ ಬಾರಿ ಸೇತುವೆ, ಅಡಿಕೆ ಮರದ ಪಾಲದ ಬದಲಾಗಿ ಕಬ್ಬಿಣದ  ಕಾಲು ಸಂಕವನ್ನು ಊರವರೇ  ನಿರ್ಮಿಸಿ  ದ್ವಿಚಕ್ರ ವಾಹನ ಸಹಿತ ಊರವರು ಭದ್ರತೆಯಿಂದ ನಡೆದಾಡುವಂತೆ ಮಾಡಲು ಯೋಜನೆ ರೂಪಿಸಿ ,   ತೂಗುಸೇತುವೆಗಳ ಸರದಾರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸುಳ್ಯದ ಗಿರೀಶ್ ಭಾರಧ್ವಾಜ್ ಅವರ ಪುತ್ರ ಪತಂಜಲಿ ಭಾರಧ್ವಾಜ್ ಅವರ ನೇತೃತ್ವದಲ್ಲಿ  ದ್ವಿಚಕ್ರ ವಾಹನ ಓಡಾಡಲು ಸಾಧ್ಯವಾಗುವಂತೆ ಕಬ್ಬಿಣದ ಕಾಲು ಸಂಕ  ರಚನೆ ಮಾಡಲು ಮಾತುಕತೆ ನಡೆಸಿ ಅಂದಾಜುಪಟ್ಟಿ ‌ತಯಾರಿಸಿ  ಕಬ್ಬಿಣದ ಕಾಲು ನಿರ್ಮಿಸಿದ್ದಾರೆ. ಇದಕ್ಕಾಗಿ ಊರ ಜನರು ಶ್ರಮದಾನದ ಮೂಲಕ ನೆರವು ಹಾಗೂ ಧನ ಸಹಾಯ ಮಾಡಿದರೆ, ಪರವೂರಿನ ಅನೇಕದ ದಾನಿಗಳು ನೆರವು ನೀಡಿದ್ದಾರೆ. ಕಂಪನಿಗಳೂ ಸಹಾಯ ಮಾಡಿದ್ದಾರೆ. ಸುಮಾರು 1 ಲಕ್ಷರೂಪಾಯಿ ವೆಚ್ಚದಲ್ಲಿ ಈ ಸೇತುವೆ ನಿರ್ಮಾಣವಾಗಿದೆ. ಸರಕಾರದ ಹಾಗೂ ಸ್ಥಳಿಯ ಯಾವುದೇ ಇಲಾಖೆಗಳಿಂದ ನೆರವು ಪಡೆಯದೇ ಕಾಲು ಸಂಕ ರಚನೆ ಮಾಡಲಾಗಿದೆ.
ಪತಂಜಲಿ ಭಾರಧ್ವಾಜ್‌ ಅವರ ತಂಡ
ಜೂ.5 ರಂದು ಅಂದಾಜುಪಟ್ಟಿ ತಯಾರಿಸಿ ಜೂ.24 ರಂದು ಕಾಮಗಾರಿ ಮುಕ್ತಾಯಗೊಂಡಿಡ್ದು ಅತೀ ವೇಗದಲ್ಲಿ ಈ ಕಾಮಗಾರಿ ಮುಗಿದಿರುವುದು ಪತಂಜಲಿ ಭಾರಧ್ವಾಜ್‌ ಅವರ ಕಾರ್ಯ ತತ್ಪರತೆ ಹಾಗೂ  ಗ್ರಾಮಸ್ಥರ ಕಾಳಜಿ ಮತ್ತು ಸೇತುವೆಯ ಬೇಡಿಕೆಗೆ ಸಾಕ್ಷಿಯಾಗಿದೆ. ಈ ಸೇತುವೆ ಸುಮಾರು 20 ಮೀಟರ್‌ ಉದ್ದವಿದ್ದು ಸುಮಾರು 1.2 ಮೀಟರ್‌ ಅಗಲಿವಿದೆ. ನಡೆದಾಡುವುದು  ಮಾತ್ರವಲ್ಲ ದ್ವಿಚಕ್ರ  ವಾಹನ ಕೂಡಾ ಓಡಾಡಬಹುದಾಗಿದೆ. ಎಲ್ಲಾ ಕೆಲಸಗಳು ಮುಗಿದಿದ್ದು , ಸಣ್ಣ ಪುಟ್ಟ ಕೆಲಸಗಳ ಬಳಿಕ ವಾರದಲ್ಲಿ  ಜನರ ಓಡಾಟ ಹಾಗೂ ದ್ವಿಚಕ್ರ ವಾಹನಗಳ ಓಡಾಟಕ್ಕೆ ಮುಕ್ತವಾಗಲಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

8 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

8 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

17 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

21 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago