ಪಂಜದಲ್ಲಿ ನವಸಾಕ್ಷರರಿಂದ ಗ್ರಾಮಾಭಿವೃದ್ದಿಯ ಚಿಂತನೆ | ಗ್ರಾಮ ಸ್ವರಾಜ್ಯದತ್ತ ವಿನೂತನ ಹೆಜ್ಜೆ |

August 9, 2021
10:59 PM
ಗಾಂಧೀಜಿಯವರ ಚಿಂತನೆಯೇ ಗ್ರಾಮ ಸ್ವರಾಜ್ಯ. ಈಗ ಈ ಚಿಂತನೆ ಆರಂಭವಾಗಿರುವುದು  ಸುಳ್ಯ ತಾಲೂಕಿನ ಪಂಜದಲ್ಲಿ ನವಸಾಕ್ಷರರಿಂದ. ಈ ಹೆಜ್ಜೆ ಸದ್ದಿಲ್ಲದೆ ಮುಂದಡಿ ಇಡುತ್ತಿದೆ. ವಿವಿಧ ಕಾರಣಗಳಿಂದ ಗಮನ ಸೆಳೆದಿದೆ ಈ ಚಳುವಳಿ. ಪಂಜದ ಅಳ್ಪೆ ಚಿಂಗಾಣಿಗುಡ್ಡೆ ಪ್ರದೇಶದ ಜಿನ್ನಪ್ಪ ಗೌಡ ಅವರು ಗ್ರಾಮ ಸ್ವರಾಜ್ಯ ಸಾಕಾರದಲ್ಲಿ ಮುಂಚೂಣಿಯಲ್ಲಿದ್ದಾರೆ.

Advertisement
Advertisement

ರೂರಲ್‌ ಮಿರರ್‌ ಸಂದರ್ಶನ

ಸಾಕ್ಷರತಾ ಆಂದೋಲನ ಆರಂಭವಾದಾಗ ಸುಳ್ಯ ತಾಲೂಕಿನ ಪಂಜದಲ್ಲಿ ಕೂಡಾ ಓದು ಬಾರದೇ ಇರುವವರಿಗೆ ಓದಿಸುವ, ಬರೆಯಿಸುವ ಆಂದೋಲನ ಆರಂಭವಾಯಿತು. ಹೀಗಾಗಿ ಪಂಜದಲ್ಲೂ 1990 ರಲ್ಲಿ ಸಾಕ್ಷರತಾ ಆಂದೋಲನ ಹೆಜ್ಜೆ ಇರಿಸಿತು. 1995 ರ ಹೊತ್ತಿಗೆ ನವಸಾಕ್ಷರರ ಪ್ರೇರಕರಾಗಿ ಜಿನ್ನಪ್ಪ ಅವರು ತೊಡಗಿಸಿಕೊಂಡರು. ಅಕ್ಷರ ಕಲಿಸುವುದು  ಹಾಗೂ ಅನೇಕರ ಬದುಕಿಗೆ ಪ್ರೇರೇಪಣೆ ನೀಡುವ ಕೆಲಸ ಆರಂಭಿಸಿದರು. ರಾತ್ರಿ ಶಾಲೆ ನಡೆಸಿ ಕಾಲನಿ ನಿವಾಸಿಗಳಿಗೆ, ಅಕ್ಷರ ಬಾರದೇ ಇರುವವರಿಗೆ ಅಕ್ಷರ ಬರೆಯಲು, ಸಹಿ ಹಾಕಲು ಕಲಿಸಿದರು.  2010 ರ ವರೆಗೆ ಪ್ರೇರಕರಾಗಿ ಕೆಲಸ ಮಾಡಿ ನಂತರ  2015  ರ ವರೆಗೆ ನವಸಾಕ್ಷರರಿಗೆ ವೃತ್ತಿ ಕೌಶಲ್ಯ ತರಬೇತಿ ನೀಡಿದರು. ಅಷ್ಟವರೆಗೂ ನವಸಾಕ್ಷರರ ಸಂಘಟನೆ ಮಾಡುತ್ತಾ ಬಂದಿರುವ ಜಿನ್ನಪ್ಪ ಅವರು ನವಸಾಕ್ಷರರ ಬದುಕಿಗೆ ಪ್ರೇರಣಾದಾಯಿಯಾಗಿದ್ದರು. ಪುರುಷೋತ್ತಮ ಮುಡೂರು ಅವರಂತಹವರೂ ಮಾರ್ಗದರ್ಶನ ನೀಡಿದರು.

 

 

ನವಸಾಕ್ಷರರ ಸಂಘಟನೆಯ ಸಮಯದಲ್ಲಿ  ಪಂಜದ ಪ್ರದೇಶದಲ್ಲಿ ಹಲವಾರು ಸಾಮಾಜಿಕ ಕಾರ್ಯಗಳನ್ನು  ಮಾಡಿದರು. ಅದರಲ್ಲಿ  ನವಸಾಕ್ಷರರ ಭೂಮಿ ಸಮಸ್ಯೆ ನಿವಾರಣೆ,  ಮನೆ ನಿರ್ಮಾಣ ಸೇರಿದಂತೆ ವಿವಿಧ ಕೆಲಸ ಮಾಡಿದ್ದರು. ಈಗ ಹಲವು ನವಸಾಕ್ಷರರು ಸ್ವತಂತ್ರವಾಗಿ ಯೋಚಿಸುವ ಹಂತಕ್ಕೆ ಬಂದಿದ್ದಾರೆ ಎಂದು ಜಿನ್ನಪ್ಪ ಹೇಳುತ್ತಾರೆ. ಆದರೆ ಅನೇಕ ಮೂಲಭೂತ ಸಮಸ್ಯೆಗಳು ಇದೆ. ಈ ಕಾರಣಕ್ಕೆ ಪಂಚಾಯತ್‌ ಗ್ರಾಮ ಸಭೆಯಲ್ಲಿ ಧ್ವನಿ ಎತ್ತುವ ಕಾರ್ಯ ಮಾಡಲಾಗಿತ್ತು. ಈ ಸಮಯದಲ್ಲಿ  ಕೆಲವು ವಿರೋಧಗಳು ಬಂದಾಗ ನವಸಾಕ್ಷರರೆಲ್ಲರೂ ಒಂದಾಗಿ ಗ್ರಾಮ ಪಂಚಾಯತ್‌ ಚುನಾವಣೆಗೆ ಸ್ಫರ್ಧೆ ಮಾಡಲು ನಿರ್ಧರಿಸುತ್ತಾರೆ. ಇಲ್ಲಿಂದ ಬಳಿಕ ಸಾಮಾಜಿಕವಾಗಿ ನವಸಾಕ್ಷರರ ಚಟುವಟಿಕೆ ತೆರೆದುಕೊಳ್ಳುತ್ತದೆ. ಪಂಚಾಯತ್‌ ಗಳು ಜನರ ಪಂಚಾಯತ್‌ ಆಗಬೇಕೆಂದು ಹೆಜ್ಜೆ ಇಡುತ್ತಾರೆ ಚುನಾವಣಾ ಕಣಕ್ಕೆ ಧುಮುಕುತ್ತಾರೆ. ಪಂಜ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಪಂಜದ 5  ವಾರ್ಡ್‌ ಗಳಲ್ಲಿ ಗ್ರಾಮ ಸ್ವರಾಜ್‌ ಎಂಬ ತಂಡದ ಮೂಲಕ ಸ್ಫರ್ಧೆ ಮಾಡುತ್ತಾರೆ. ಚುನಾವಣೆಗೆ ಸ್ಫರ್ಧೆ ಮಾಡಿದವರಲ್ಲಿ  ಇಬ್ಬರು ನವಸಾಕ್ಷರರು ಉಳಿದೆಲ್ಲರೂ ವಿಧ್ಯಾಭ್ಯಾಸ ಮಾಡಿದರು.

ಚುನಾವಣಾ ಸಮಯದಲ್ಲಿ  ಅಳ್ಪೆ ಚಿಂಗಾಣಿ ಗುಡ್ಡೆಯಲ್ಲಿ  ಕುಡಿಯುವ ನೀರಿನ ಟ್ಯಾಂಕ್‌  ರಚನೆ, ವಿದ್ಯುತ್‌ ಸಮಸ್ಯೆ ನಿವಾರಣೆ ಹೀಗೇ ವಿವಿಧ ಯೋಜನೆ ಹಾಗೂ ಗುರಿ ಇರಿಸಿ ಸ್ಫರ್ಧೆ ಮಾಡಿದ್ದರು. ಸೋತರೂ ತಾವು ಕೆಲಸ ಮಡುವುದಾಗಿ ಜನರಿಗೆ ತಿಳಿಸಿದ್ದರು. ಈಗ ಕೆಲಸ ಮಾಡುತ್ತಿದ್ದಾರೆ.

 

ಧ್ವಜ ಸ್ತಂಭದ ಬಗ್ಗೆ ಧ್ವನಿ
 ನವಸಾಕ್ಷರರು ಹಣ ಹಾಕಿಸಿ ನಿರ್ಮಿಸಿದ ಧ್ವಜಸ್ತಂಭವನ್ನು  ಗ್ರಾಮ ಪಂಚಾಯತ್‌ ಕಟ್ಟದ ನಿರ್ಮಾಣದ ವೇಳೆ ಒಡೆದು ಹಾಕಿದೆ. ಅಮೃತ ಮಹೋತ್ಸವ ಕಾರಣ ಈ ಬಾರಿಯ ಸ್ವಾತಂತ್ರ್ಯ ಉತ್ಸವ ಮಹತ್ವ ಪಡೆದಿದೆ. ನವಸಾಕ್ಷರರಿಗೆ ಇದೀಗ ಆ.15  ರ ಒಳಗಾಗಿ ಮತ್ತೆ ಧ್ವಜ ಸ್ತಂಭ ನಿರ್ಮಿಸಿ ಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ನವಸಾಕ್ಷರರು  1990  ರಲ್ಲಿ  50 ಪೈಸೆ, ಒಂದು ರೂಪಾಯಿ ಹಣ ಸಂಗ್ರಹಿಸಿ, ನವ ಸಾಕ್ಷರರು ಪ್ರತಿಯೊಬ್ಬರೂ ಎರಡು ರೂಪಾಯಿ ಸಂಗ್ರಹಿಸಿ ಕಟ್ಟಿದ ಧ್ವಜ ಸ್ಥಂಭ ತೆಗೆದಿದ್ದಾರೆ, ಆಗ ನೀಡಿದ ಭರವಸೆಯಂತೆ ಪುನರ್‌ ನಿರ್ಮಾಣ ಮಾಡಬೇಕು ಎಂಬುದು ಒತ್ತಾಯವಾಗಿದೆ.

ಮೂಲಭೂತ ಸೌಕರ್ಯ ಪಡೆಯಲು ಗಾಂಧಿತತ್ತ್ವದ ಮೂಲಕ ನಡೆಯಲಾಗುತ್ತಿದೆ ಎನ್ನುವ ಜಿನ್ನಪ್ಪ ಅಳ್ಪೆ,  ಗ್ರಾಮ ಪಂಚಾಯತ್‌ ಗಳು ಯಾವತ್ತೂ ಜನರ ಪಂಚಾಯತ್ ಆಗಬೇಕು  ಪಕ್ಷಗಳ ಪಂಚಾಯತ್‌ ಆಗಬಾರದು ಎನ್ನುತ್ತಾರೆ  ಜಿನ್ನಪ್ಪ

 

 

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror