Advertisement
ಸುದ್ದಿಗಳು

ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಲು ಒತ್ತಾಯ | ಗ್ರಾಮಸ್ವರಾಜ್ ತಂಡದಿಂದ ಜಿಲ್ಲಾಧಿಕಾರಿಗಳಿಗೆ ಮನವಿ |

Share

ಹೋಬಳಿ ಮಟ್ಟದ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಬೇಕು ಎಂದು ಒತ್ತಾಯಿಸಿ ಪಂಜದ ಗ್ರಾಮಸ್ವರಾಜ್ ತಂಡದ ಸದಸ್ಯರು ಜಿಲ್ಲಾದಿಕಾರಿಗಳನ್ನು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಯವರನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಈಚೆಗೆ ಮನವಿ ನೀಡಲಾಯಿತು.

ಪಂಜ ಹೋಬಳಿ ಕೇಂದ್ರಕ್ಕೆ 19 ಗ್ರಾಮವು ಬರುತ್ತಿದ್ದು, ಪ್ರಮುಖ ಆರೋಗ್ಯ ಕೇಂದ್ರವೂ ಇದಾಗಿದೆ. ಸದ್ಯ ಎಲ್ಲಾ ವ್ಯವಸ್ಥೆಗಳನ್ನೂ ಹೊಂದಿದೆ, ಇನ್ನಷ್ಟು ವ್ಯವಸ್ಥೆಗಳು ಬೇಕಾಗಿದೆ. ಪಂಜವು ಎಲ್ಲಾ ಪ್ರದೇಶಗಳಿಗೂ ಪ್ರಮುಖ ಕೇಂದ್ರವೂ ಆಗಿದೆ. ಹೀಗಾಗಿ ಬಡ ಜನರ ಆರೋಗ್ಯ ದೃಷ್ಟಿಯಿಂದ ತಕ್ಷಣವೇ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಬೇಕು, ದಿನದ 24 ಗಂಟೆಯೂ ಸೇವೆ ಲಭ್ಯವಾಗಬೇಕು  ಎಂದು ಮನವಿಯಲ್ಲಿ  ಒತ್ತಾಯಿಸಲಾಗಿದೆ. ಒಂದು ವೇಳೆ ಈ ಬಗ್ಗೆ ಯಾವುದೇ ಕ್ರಮ ಆಗದೇ ಇದ್ದಲ್ಲಿ ಪಂಜ ಹೋಬಳಿ ಕೇಂದ್ರಕ್ಕೆ 19  ಜನರು  ಒಂದಾಗಿ ಧರಣಿ ಸತ್ಯಾಗ್ರಹ ಮಾಡಲಾಗುವುದು  ಎಂದು ಮನವಿಯಲ್ಲಿ  ತಿಳಿಸಲಾಗಿದೆ.

ಈ ಸಂಬಂಧವಾಗಿ ಅ.2 ರಂದು ಸಾಂಕೇತಿಕವಾಗಿ ಗ್ರಾಮ ಸ್ವರಾಜ್ ಇದರ ವತಿಯಿಂದ ಸತ್ಯಾಗ್ರಹ ಮಾಡುವುದೆಂದು ನಿರ್ಣಯಿಸಲಾಗಿದೆ. ಈ ಸತ್ಯಾಗ್ರಹಕ್ಕೆ ಎಲ್ಲಾ ಸಂಘ ಸಂಸ್ಥೆಗಳು ಸಾರ್ವಜನಿಕರು ಭಾಗವಹಿಸಬೇಕಾಗಿ ಗ್ರಾಮಸ್ವರಾಜ್ ತಂಡದ ಮುಖಂಡ , ಸಾಮಾಜಿಕ ಕಾರ್ಯಕರ್ತ ಜಿನ್ನಪ್ಪ ಗೌಡ ಅಳ್ಪೆ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

8 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

8 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

12 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago