ಹೋಬಳಿ ಮಟ್ಟದ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಬೇಕು ಎಂದು ಒತ್ತಾಯಿಸಿ ಪಂಜದ ಗ್ರಾಮಸ್ವರಾಜ್ ತಂಡದ ಸದಸ್ಯರು ಜಿಲ್ಲಾದಿಕಾರಿಗಳನ್ನು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಯವರನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಈಚೆಗೆ ಮನವಿ ನೀಡಲಾಯಿತು.
ಪಂಜ ಹೋಬಳಿ ಕೇಂದ್ರಕ್ಕೆ 19 ಗ್ರಾಮವು ಬರುತ್ತಿದ್ದು, ಪ್ರಮುಖ ಆರೋಗ್ಯ ಕೇಂದ್ರವೂ ಇದಾಗಿದೆ. ಸದ್ಯ ಎಲ್ಲಾ ವ್ಯವಸ್ಥೆಗಳನ್ನೂ ಹೊಂದಿದೆ, ಇನ್ನಷ್ಟು ವ್ಯವಸ್ಥೆಗಳು ಬೇಕಾಗಿದೆ. ಪಂಜವು ಎಲ್ಲಾ ಪ್ರದೇಶಗಳಿಗೂ ಪ್ರಮುಖ ಕೇಂದ್ರವೂ ಆಗಿದೆ. ಹೀಗಾಗಿ ಬಡ ಜನರ ಆರೋಗ್ಯ ದೃಷ್ಟಿಯಿಂದ ತಕ್ಷಣವೇ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಬೇಕು, ದಿನದ 24 ಗಂಟೆಯೂ ಸೇವೆ ಲಭ್ಯವಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಒಂದು ವೇಳೆ ಈ ಬಗ್ಗೆ ಯಾವುದೇ ಕ್ರಮ ಆಗದೇ ಇದ್ದಲ್ಲಿ ಪಂಜ ಹೋಬಳಿ ಕೇಂದ್ರಕ್ಕೆ 19 ಜನರು ಒಂದಾಗಿ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂಬಂಧವಾಗಿ ಅ.2 ರಂದು ಸಾಂಕೇತಿಕವಾಗಿ ಗ್ರಾಮ ಸ್ವರಾಜ್ ಇದರ ವತಿಯಿಂದ ಸತ್ಯಾಗ್ರಹ ಮಾಡುವುದೆಂದು ನಿರ್ಣಯಿಸಲಾಗಿದೆ. ಈ ಸತ್ಯಾಗ್ರಹಕ್ಕೆ ಎಲ್ಲಾ ಸಂಘ ಸಂಸ್ಥೆಗಳು ಸಾರ್ವಜನಿಕರು ಭಾಗವಹಿಸಬೇಕಾಗಿ ಗ್ರಾಮಸ್ವರಾಜ್ ತಂಡದ ಮುಖಂಡ , ಸಾಮಾಜಿಕ ಕಾರ್ಯಕರ್ತ ಜಿನ್ನಪ್ಪ ಗೌಡ ಅಳ್ಪೆ ತಿಳಿಸಿದ್ದಾರೆ.
ಶಿಕ್ಷಣ ಪದ್ದತಿ ಬದಲಾಗಬೇಕು. ಕೃಷಿಯೂ ಪಠ್ಯದಭಾಗವಾಬೇಕು.ಎಳವೆಯಲ್ಲಿಯೇ ಕೃಷಿಯನ್ನು ಕಲಿಯುವ ಹಾಗೆ ಆಗಬೇಕು ಎನ್ನುತ್ತಾರೆ…
ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ಮೇ.10 ಶುಕ್ರವಾರ, ಈ ದಿನದಂದು ಚಂದ್ರ…
ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…
ಎಲ್ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ 15…
ಭಾರತದಲ್ಲಿ ಎಲ್ಲಾ ಧರ್ಮದವರಿಗೂ ಸಮಾನ ಹಕ್ಕು ಇದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ…
ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ…