ಹೋಬಳಿ ಮಟ್ಟದ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಬೇಕು ಎಂದು ಒತ್ತಾಯಿಸಿ ಪಂಜದ ಗ್ರಾಮಸ್ವರಾಜ್ ತಂಡದ ಸದಸ್ಯರು ಜಿಲ್ಲಾದಿಕಾರಿಗಳನ್ನು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಯವರನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಈಚೆಗೆ ಮನವಿ ನೀಡಲಾಯಿತು.
ಪಂಜ ಹೋಬಳಿ ಕೇಂದ್ರಕ್ಕೆ 19 ಗ್ರಾಮವು ಬರುತ್ತಿದ್ದು, ಪ್ರಮುಖ ಆರೋಗ್ಯ ಕೇಂದ್ರವೂ ಇದಾಗಿದೆ. ಸದ್ಯ ಎಲ್ಲಾ ವ್ಯವಸ್ಥೆಗಳನ್ನೂ ಹೊಂದಿದೆ, ಇನ್ನಷ್ಟು ವ್ಯವಸ್ಥೆಗಳು ಬೇಕಾಗಿದೆ. ಪಂಜವು ಎಲ್ಲಾ ಪ್ರದೇಶಗಳಿಗೂ ಪ್ರಮುಖ ಕೇಂದ್ರವೂ ಆಗಿದೆ. ಹೀಗಾಗಿ ಬಡ ಜನರ ಆರೋಗ್ಯ ದೃಷ್ಟಿಯಿಂದ ತಕ್ಷಣವೇ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಬೇಕು, ದಿನದ 24 ಗಂಟೆಯೂ ಸೇವೆ ಲಭ್ಯವಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಒಂದು ವೇಳೆ ಈ ಬಗ್ಗೆ ಯಾವುದೇ ಕ್ರಮ ಆಗದೇ ಇದ್ದಲ್ಲಿ ಪಂಜ ಹೋಬಳಿ ಕೇಂದ್ರಕ್ಕೆ 19 ಜನರು ಒಂದಾಗಿ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂಬಂಧವಾಗಿ ಅ.2 ರಂದು ಸಾಂಕೇತಿಕವಾಗಿ ಗ್ರಾಮ ಸ್ವರಾಜ್ ಇದರ ವತಿಯಿಂದ ಸತ್ಯಾಗ್ರಹ ಮಾಡುವುದೆಂದು ನಿರ್ಣಯಿಸಲಾಗಿದೆ. ಈ ಸತ್ಯಾಗ್ರಹಕ್ಕೆ ಎಲ್ಲಾ ಸಂಘ ಸಂಸ್ಥೆಗಳು ಸಾರ್ವಜನಿಕರು ಭಾಗವಹಿಸಬೇಕಾಗಿ ಗ್ರಾಮಸ್ವರಾಜ್ ತಂಡದ ಮುಖಂಡ , ಸಾಮಾಜಿಕ ಕಾರ್ಯಕರ್ತ ಜಿನ್ನಪ್ಪ ಗೌಡ ಅಳ್ಪೆ ತಿಳಿಸಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…