Advertisement
Political mirror

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ: ಕಾರ್ಡ್ ಪಡೆಯಲು ಮುಗಿಬಿದ್ದ ಜನ

Share

ಕಾಂಗ್ರೆಸ್  ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದ್ದು, ಕಾರ್ಡ್ ಪಡೆಯಲು ಜನ ಮುಗಿಬೀಳುತ್ತಿದ್ದಾರೆ.ಸುಮಾರು 2.88 ಲಕ್ಷ ಬಿಪಿಎಲ್ ಕಾರ್ಡ್ ಅರ್ಜಿಗಳು ವಿಲೇವಾರಿಗಾಗಿ ಕಾಯುತ್ತಿವೆ. ರಾಜ್ಯದಲ್ಲಿ 2023 ಜನವರಿಯಿಂದ ಮೇ 20ರವರೆಗೆ ತುರ್ತು ಆರೋಗ್ಯ ಸೇವಾ ಸೌಲಭ್ಯಕ್ಕಾಗಿ ಹೊಸ ಪಡಿತರ ಚೀಟಿ ಪಡೆಯಲು ಸುಮಾರು 4.25 ಲಕ್ಷ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಎರಡು ತಿಂಗಳಿಂದ ಸರ್ವರ್, ದಾಖಲೆಗಳ ಸಮಸ್ಯೆ, ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹೊಸ ಅರ್ಜಿಗಳ ವಿಲೇವಾರಿ, ಹೊಸ ಕಾರ್ಡ್ ವಿತರಣೆ ಕಾರ್ಯ ಸ್ಥಗಿತಗೊಂಡಿದೆ. ಇದರಿಂದಾಗಿ ಅರ್ಜಿ ಸಲ್ಲಿಸಿರುವ ಜನರು ಕಾರ್ಡ್​ಗಳಿಗಾಗಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.

ಕಾಂಗ್ರೆಸ್​ನ ಐದು ಗ್ಯಾರಂಟಿ ಯೋಜನೆಗಳ ಘೊಷಣೆ ನಂತರ ಮತ್ತು ಚುನಾವಣೆ ಫಲಿತಾಂಶದ ಬಳಿಕ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದೆ. ಅಲ್ಲದೆ, ಪ್ರತಿ ನಿತ್ಯ 8ರಿಂದ 10 ಜನರು ಹೊಸದಾಗಿ ಬಿಪಿಎಲ್ ಕಾರ್ಡ್​ಗಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಇವರಲ್ಲಿ ನಗರ ಪ್ರದೇಶಗಳಲ್ಲಿನ ಜನರೇ ಅಧಿಕ ಸಂಖ್ಯೆಯಲ್ಲಿ ದ್ದಾರೆ. ನೂತನ ಸರ್ಕಾರದ ಸೂಚನೆಯ ಬಳಿಕ ಹೊಸ ಕಾರ್ಡ್ ಗಳ ವಿತರಣೆ, ಅರ್ಜಿಗಳ ವಿಲೇವಾರಿ ಕೆಲಸ ಆರಂಭವಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago