ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಪಿಎಲ್ ಕಾರ್ಡ್ಗಳಿಗೆ ಬೇಡಿಕೆ ಹೆಚ್ಚಿದ್ದು, ಕಾರ್ಡ್ ಪಡೆಯಲು ಜನ ಮುಗಿಬೀಳುತ್ತಿದ್ದಾರೆ.ಸುಮಾರು 2.88 ಲಕ್ಷ ಬಿಪಿಎಲ್ ಕಾರ್ಡ್ ಅರ್ಜಿಗಳು ವಿಲೇವಾರಿಗಾಗಿ ಕಾಯುತ್ತಿವೆ. ರಾಜ್ಯದಲ್ಲಿ 2023 ಜನವರಿಯಿಂದ ಮೇ 20ರವರೆಗೆ ತುರ್ತು ಆರೋಗ್ಯ ಸೇವಾ ಸೌಲಭ್ಯಕ್ಕಾಗಿ ಹೊಸ ಪಡಿತರ ಚೀಟಿ ಪಡೆಯಲು ಸುಮಾರು 4.25 ಲಕ್ಷ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಎರಡು ತಿಂಗಳಿಂದ ಸರ್ವರ್, ದಾಖಲೆಗಳ ಸಮಸ್ಯೆ, ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹೊಸ ಅರ್ಜಿಗಳ ವಿಲೇವಾರಿ, ಹೊಸ ಕಾರ್ಡ್ ವಿತರಣೆ ಕಾರ್ಯ ಸ್ಥಗಿತಗೊಂಡಿದೆ. ಇದರಿಂದಾಗಿ ಅರ್ಜಿ ಸಲ್ಲಿಸಿರುವ ಜನರು ಕಾರ್ಡ್ಗಳಿಗಾಗಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.
ಕಾಂಗ್ರೆಸ್ನ ಐದು ಗ್ಯಾರಂಟಿ ಯೋಜನೆಗಳ ಘೊಷಣೆ ನಂತರ ಮತ್ತು ಚುನಾವಣೆ ಫಲಿತಾಂಶದ ಬಳಿಕ ಬಿಪಿಎಲ್ ಕಾರ್ಡ್ಗಳಿಗೆ ಬೇಡಿಕೆ ಹೆಚ್ಚಿದೆ. ಅಲ್ಲದೆ, ಪ್ರತಿ ನಿತ್ಯ 8ರಿಂದ 10 ಜನರು ಹೊಸದಾಗಿ ಬಿಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಇವರಲ್ಲಿ ನಗರ ಪ್ರದೇಶಗಳಲ್ಲಿನ ಜನರೇ ಅಧಿಕ ಸಂಖ್ಯೆಯಲ್ಲಿ ದ್ದಾರೆ. ನೂತನ ಸರ್ಕಾರದ ಸೂಚನೆಯ ಬಳಿಕ ಹೊಸ ಕಾರ್ಡ್ ಗಳ ವಿತರಣೆ, ಅರ್ಜಿಗಳ ವಿಲೇವಾರಿ ಕೆಲಸ ಆರಂಭವಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…