ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಪಿಎಲ್ ಕಾರ್ಡ್ಗಳಿಗೆ ಬೇಡಿಕೆ ಹೆಚ್ಚಿದ್ದು, ಕಾರ್ಡ್ ಪಡೆಯಲು ಜನ ಮುಗಿಬೀಳುತ್ತಿದ್ದಾರೆ.ಸುಮಾರು 2.88 ಲಕ್ಷ ಬಿಪಿಎಲ್ ಕಾರ್ಡ್ ಅರ್ಜಿಗಳು ವಿಲೇವಾರಿಗಾಗಿ ಕಾಯುತ್ತಿವೆ. ರಾಜ್ಯದಲ್ಲಿ 2023 ಜನವರಿಯಿಂದ ಮೇ 20ರವರೆಗೆ ತುರ್ತು ಆರೋಗ್ಯ ಸೇವಾ ಸೌಲಭ್ಯಕ್ಕಾಗಿ ಹೊಸ ಪಡಿತರ ಚೀಟಿ ಪಡೆಯಲು ಸುಮಾರು 4.25 ಲಕ್ಷ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಎರಡು ತಿಂಗಳಿಂದ ಸರ್ವರ್, ದಾಖಲೆಗಳ ಸಮಸ್ಯೆ, ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹೊಸ ಅರ್ಜಿಗಳ ವಿಲೇವಾರಿ, ಹೊಸ ಕಾರ್ಡ್ ವಿತರಣೆ ಕಾರ್ಯ ಸ್ಥಗಿತಗೊಂಡಿದೆ. ಇದರಿಂದಾಗಿ ಅರ್ಜಿ ಸಲ್ಲಿಸಿರುವ ಜನರು ಕಾರ್ಡ್ಗಳಿಗಾಗಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.
ಕಾಂಗ್ರೆಸ್ನ ಐದು ಗ್ಯಾರಂಟಿ ಯೋಜನೆಗಳ ಘೊಷಣೆ ನಂತರ ಮತ್ತು ಚುನಾವಣೆ ಫಲಿತಾಂಶದ ಬಳಿಕ ಬಿಪಿಎಲ್ ಕಾರ್ಡ್ಗಳಿಗೆ ಬೇಡಿಕೆ ಹೆಚ್ಚಿದೆ. ಅಲ್ಲದೆ, ಪ್ರತಿ ನಿತ್ಯ 8ರಿಂದ 10 ಜನರು ಹೊಸದಾಗಿ ಬಿಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಇವರಲ್ಲಿ ನಗರ ಪ್ರದೇಶಗಳಲ್ಲಿನ ಜನರೇ ಅಧಿಕ ಸಂಖ್ಯೆಯಲ್ಲಿ ದ್ದಾರೆ. ನೂತನ ಸರ್ಕಾರದ ಸೂಚನೆಯ ಬಳಿಕ ಹೊಸ ಕಾರ್ಡ್ ಗಳ ವಿತರಣೆ, ಅರ್ಜಿಗಳ ವಿಲೇವಾರಿ ಕೆಲಸ ಆರಂಭವಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…